ನಿವೃತ್ತ ಐಎಎಸ್ ಅಧಿಕಾರಿ ರತ್ನಾಪ್ರಭಾರಿಗೆ ಪಕ್ಷಕ್ಕೆ ಆಹ್ವಾನಿಸಿದ ಅನಂತಕುಮಾರ್ ಹೆಗಡೆ

ಬೆಂಗಳೂರು: ನಿವೃತ್ತ ಐಎಎಸ್ ಅಧಿಕಾರಿ ರತ್ನಪ್ರಭಾರವರಿಗೆ ಬಿಜೆಪಿಗೆ ಸೇರುವಂತೆ ಟ್ವಿಟ್ಟರ್ ಮೂಲಕ ಕೇಂದ್ರ ಕೌಶಾಲ್ಯಭಿವೃದ್ಧಿ ಸಚಿವ ಅನಂತಕುಮಾರ ಹೆಗಡೆ ಆಹ್ವಾನ ನೀಡಿದ್ದಾರೆ.

ಈ ಕುರಿತು ತಮ್ಮ ಟ್ವಿಟ್ಟರಿನಲ್ಲಿ, ನಿವೃತ್ತ ಐಎಎಸ್ ಅಧಿಕಾರಿಯಾದ ರತ್ನಪ್ರಭಾವರವರು ಬಿಜೆಪಿಗೆ ಸೇರ್ಪಡೆಗೊಳ್ಳುವುದುನ್ನು ನಾನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ. ಅಲ್ಲದೇ ಅವರು ಐಎಎಸ್ ಅಧಿಕಾರಿಯಾಗಿದ್ದಾಗ ಮಾಡಿದ ಹಲವು ಕಾರ್ಯಗಳ ಅನುಭವವನ್ನು ರಾಜಕೀಯದಲ್ಲಿ ಮುಂದುವರಿಸಿ, ಜನರ ಏಳಿಗೆಗೆ ದುಡಿಯುವಂತಾಗಬೇಕು ಎಂದು ಬರೆದುಕೊಂಡಿದ್ದಾರೆ.

ಕಳೆದ ಎರಡು-ಮೂರು ದಿನಗಳಿಂದ ಬಿಜೆಪಿ ವಲಯದಲ್ಲಿ ರತ್ನಪ್ರಭಾ ಹೆಸರು ಭಾರೀ ಕೇಳಿಬರುತ್ತಿದ್ದು, ಲೋಕಸಭಾ ಚುನಾವಣೆಯಲ್ಲಿ ಅವರನ್ನು ಕಾಂಗ್ರೆಸ್ಸಿನ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸ್ಪರ್ಧಿಸುವ ಕುರಿತು ಊಹಾಪೋಹಗಳು ಕೇಳಿಬರುತ್ತಿವೆ. ಅಲ್ಲದೇ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ರತ್ನಪ್ರಭಾರವರನ್ನು ಅಭ್ಯರ್ಥಿಯನ್ನಾಗಿ ಮಾಡಿದರೇ, ಎಡ ಸಮುದಾಯದ ಮತಗಳ ಜೊತೆಗೆ ಪ್ರಜ್ಞಾವಂತ ಮತದಾರರನ್ನು ಸೆಳೆಯಬಹುದು ಎಂಬುದು ಬಿಜೆಪಿಯ ಲೆಕ್ಕಚಾರವಾಗಿದೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಖರ್ಗೆ ವಿರುದ್ಧ ನಿವೃತ್ತ ಐಎಎಸ್ ಅಧಿಕಾರಿ ರತ್ನಪ್ರಭಾ ಸ್ಪರ್ಧೆ?

ಕೇಂದ್ರ ಸಚಿವರ ಟ್ವೀಟ್‍ಗೆ ಪ್ರತಿಕ್ರಿಯಿಸಿರುವ ಜಾಲತಾಣಿಗರು, ನೀವೊಬ್ಬ ಕೇಂದ್ರ ಸಚಿವರು, ಪಕ್ಷದೊಳಗೆ ಏನು ನಡೆಯುತ್ತಿದೆ ಎಂಬುದು ನಿಮಗಲ್ಲದೇ ಬೇರೆ ಇನ್ನಾರಿಗೆ ತಿಳಿಯುತ್ತದೆ ಎಂದು ಕಿಚಾಯಿಸಿದ್ದಾರೆ. ಅಲ್ಲದೇ ರತ್ನಾಪ್ರಭಾರವರನ್ನು ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸ್ಪರ್ಧಿಸುವ ಕುರಿತು ಹಲವರು ತಮ್ಮ ಅಭಿಪ್ರಾಯಗಳನ್ನು ಸಚಿವರಿಗೆ ರೀ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಕಲಬುರಗಿ ಲೋಕಸಭಾ ಕ್ಷೇತ್ರದ ಟಿಕೆಟ್‍ಗಾಗಿ ಬಿಎಸ್‍ವೈ ಎದುರೇ ಕಿತ್ತಾಡಿಕೊಂಡ ಸ್ಥಳೀಯ ನಾಯಕರು

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *