ಸಂಸಾರ ನಡೆಸೋಣ ಬಾ ಎಂದ ಪತಿಯ ಮರ್ಮಾಂಗವನ್ನೇ ಕತ್ತರಿಸಿದ ಪತ್ನಿ

ಅಮರಾವತಿ: ಸಂಸಾರ ನಡೆಸೋಣ ಬಾ ಎಂದು ಕರೆದ ಪತಿಯ ಮರ್ಮಾಂಗವನ್ನು ಪತ್ನಿ ಕತ್ತರಿಸಿರುವ ಅಮಾನವೀಯ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ನಡೆದಿದೆ.

ಪಾಣ್ಯಂ ತಾಲೂಕಿನ ಎಸ್.ಕೊಟ್ಟಾಲ ಗ್ರಾಮದ ಯೂನುಸ್ (23) ಪತ್ನಿಯಿಂದ ಹಲ್ಲೆಗೆ ಒಳಗಾದ ಪತಿ. ಹಸೀನಾಳ ಪತಿಯ ಮರ್ಮಾಂಗ ಕತ್ತರಿಸಿದ ಪತ್ನಿ. ಕರ್ನೂಲ್ ಜಿಲ್ಲೆಯ ಗಡಿವೆಮುಲ ತಾಲೂಕಿನ ಸೋಮಾಪುರಂನಲ್ಲಿ ಗುರುವಾರ ಘಟನೆ ನಡೆದಿದೆ.

ಯೂನುಸ್ ಎರಡು ವರ್ಷಗಳ ಹಿಂದೆಯಷ್ಟೇ ಸೋಮಾಪುರಂ ಗ್ರಾಮದ ಹಸೀನಾಳನ್ನು ಮದುವೆಯಾಗಿದ್ದ. ಮದುವೆಯಾಗಿ ಕೆಲವೇ ದಿನಗಳಲ್ಲಿ ಪತಿ-ಪತ್ನಿ ಸಣ್ಣ ವಿಚಾರಕ್ಕೆ ಜಗಳವಾಡಿ ದೂರವಾಗಿದ್ದರು. ಪತಿ ಮನೆ ಬಿಟ್ಟು ಬಂದಿದ್ದ ಹಸೀನಾ ತವರು ಮನೆ ಸೇರಿದ್ದಳು. ಇಂದಲ್ಲ ನಾಳೆ ಪತ್ನಿ ಬರುತ್ತಾಳೆ ಅಂತ ಯೂನಸ್ ಎರಡು ವರ್ಷಗಳಿಂದ ಕಾಯುತ್ತಲೇ ಇದ್ದ. ಆದರೆ ಹಸೀನಾ ಮಾತ್ರ ತವರು ಮನೆಯಲ್ಲಿಯೇ ಉಳಿದಿದ್ದಳು.

ಯೂನುಸ್ ಎರಡು ವರ್ಷಗಳ ಬಳಿಕ ಸೋಮಾಪುರಂನಲ್ಲಿರುವ ಅತ್ತೆಯ ಮನೆಗೆ ತೆರಳಿ ಪತ್ನಿ ಹಸೀನಾಳನ್ನು ಸಂಸಾರ ಮಾಡೋಣ ಬಾ ಎಂದು ಕರೆದಿದ್ದಾನೆ. ಪತಿಯ ಮಾತು ಕೇಳಿದ ಹಾಸೀನಾ ಕೋಪಗೊಂಡಿದ್ದಾಳೆ. ಮಾತಿಗೆ ಮಾತು ಬೆಳೆದು, ಕೈ ಕೈ ಮಿಲಾಯಿಸಿದ್ದಾರೆ. ಕುಟುಂಬಸ್ಥರ ಜೊತೆ ಸೇರಿ ಹಸೀನಾ ಪತಿ ಯೂನುಸ್‍ನನ್ನು ಕಂಬಕ್ಕೆ ಕಟ್ಟಿ ಹಾಕಿ ಮನ ಬಂದಂತೆ ಥಳಿಸಿದ್ದಾಳೆ. ಈ ವೇಳೆ ಹಸೀನಾ ಪತಿಯ ಮರ್ಮಾಂಗವನ್ನು ಕತ್ತರಿಸಿ ಹಾಕಿದ್ದಾಳೆ.

ಗಂಭೀರವಾಗಿ ಗಾಯಗೊಂಡ ಯೂನುಸ್ ಕಾಪಾಡುವಂತೆ ಕೂಗಿ ಅಳುತ್ತಿದ್ದ ಧ್ವನಿಯನ್ನು ಕೇಳಿದ ಸ್ಥಳೀಯರು ಘಟನಾ ಸ್ಥಳಕ್ಕೆ ದೌಡಾಯಿಸಿದ್ದಾರೆ. ತಕ್ಷಣವೇ ಯೂನುಸ್‍ನನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಯೂನುಸ್ ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆ ನೀಡಲಾಗುತ್ತದೆ ಎಂದು ವರದಿಯಾಗಿದೆ.

Comments

Leave a Reply

Your email address will not be published. Required fields are marked *