ಪತಿಯ ಮೇಲಿನ ಕೋಪಕ್ಕೆ ಮಕ್ಕಳನ್ನು ಸಂಪ್‍ಗೆ ತಳ್ಳಿ ಕೊಲೆಗೈದ ತಾಯಿ

ಬೆಂಗಳೂರು: ತಾಯಿಯೇ ತನ್ನ ಇಬ್ಬರು ಮಕ್ಕಳನ್ನು ಸಂಪ್‍ಗೆ ತಳ್ಳಿ ಕೊಲೆ ಮಾಡಿದ ಮನಕಲುಕುವ ಘಟನೆ ಆನೇಕಲ್ ತಾಲೂಕಿನ ದೊಮ್ಮಸಂದ್ರ ಗ್ರಾಮದಲ್ಲಿ ನಡೆದಿದೆ.

ಚಂದನ್(7) ಹಾಗೂ ಯುವರಾಣಿ(5) ತಾಯಿಯ ಕೃತ್ಯಕ್ಕೆ ಬಲಿಯಾದ ಮಕ್ಕಳು. ಮುನಿರತ್ನಮ್ಮ ಎಸಗಿದ ತಾಯಿ. ಮುನಿರಾಜು ಹಾಗೂ ಮುನಿರತ್ನಮ್ಮ ದಂಪತಿಗೆ ಇಬ್ಬರು ಮಕ್ಕಳಿದ್ದರು. ಆದರೆ ನಿತ್ಯವೂ ಸಣ್ಣ ಪುಟ್ಟ ವಿಚಾರಕ್ಕೆ ಇಬ್ಬರು ಜಗಳವಾಡುತ್ತಿದ್ದರು.

ಕೌಟುಂಬಿಕ ಕಲಹದ ಹಿನ್ನೆಲೆ ಮುನಿರತ್ನಮ್ಮ ಗುರುವಾರ ಯಾರು ಮನೆಯಲ್ಲಿ ಇಲ್ಲದಿದ್ದಾಗ ಮಕ್ಕಳನ್ನು ಮನೆಯ ಮುಂದಿನ ಸಂಪ್‍ನಲ್ಲಿ ಮುಳುಗಿಸಿ ಕೊಲೆ ಮಾಡಿದ್ದಾಳೆ. ಬಳಿಕ ತಾನು ಕೂಡ ಸಂಪ್‍ನಲ್ಲಿ ಇಳಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಆದರೆ ಸಂಪ್‍ನಲ್ಲಿ ನೀರು ಕಡಿಮೆ ಇದ್ದಿದ್ದರಿಂದ ಮೇಲೆ ಬಂದು ಮನೆಯಲ್ಲಿ ನೇಣು ಹಾಕಿಕೊಳ್ಳಲು ಮುಂದಾಗಿದ್ದಳು. ಇದನ್ನು ನೋಡಿದ ಸ್ಥಳೀಯರು ಮುನಿರತ್ನಮ್ಮಳನ್ನು ರಕ್ಷಣೆ ಮಾಡಿದ್ದಾರೆ.

ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಸರ್ಜಾಪುರ ಪೋಲಿಸರು, ದಂಪತಿಯನ್ನು ವಶಕ್ಕೆ ಪಡೆದಿದ್ದಾರೆ. ಕೌಟುಂಬಿಕ ಕಲಹದಿಂದ ಮನನೊಂದು, ಮಕ್ಕಳನ್ನು ಕೊಲೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾಗಿ ಮುನಿರತ್ನಮ್ಮ ಪೊಲೀಸ್ ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾಳೆ.

Comments

Leave a Reply

Your email address will not be published. Required fields are marked *