ಸರಿಯಾಗಿ ಕೆಲಸ ನಿರ್ವಹಿಸಿದ ಅಧಿಕಾರಿಗಳಿಗೆ ಉಪಲೋಕಾಯುಕ್ತರಿಂದ ಕ್ಲಾಸ್

ಬೆಂಗಳೂರು: ಉಪಲೋಕಾಯುಕ್ತ ಎನ್. ಆನಂದ್ ನೇತೃತ್ವದ ತಂಡವು ಇಂದು ಬೆಳಿಗ್ಗೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿತು. ಈ ವೇಳೆ ಕಚೇರಿಯ ಸಮಯವಾಗಿದ್ದರೂ ಬಾರದ ಅಧಿಕಾರಿಗಳ ವಿರುದ್ಧ ಉಪಲೋಕಾಯುಕ್ತರು ಗರಂ ಆಗಿ, ಸಮಯಕ್ಕೆ ಸರಿಯಾಗಿ ಕಚೇರಿಗೆ ಬರುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಆನೇಕಲ್ ತಾಲೂಕು ಕಚೇರಿಯಲ್ಲಿ ಖಾತೆ ಪಹಣಿಗಳನ್ನು ಸರಿಯಾದ ಸಮಯಕ್ಕೆ ಮಾಡಿಕೊಡುತ್ತಿಲ್ಲ. ಕಡತಗಳ ವಿಲೇವಾರಿ ಮಾಡದೆ ಸಾರ್ವಜನಿಕರಿಗೆ ವಿಳಂಬ ಮಾಡಲಾಗುತ್ತಿದೆ ಎಂಬ ದೂರು ಬಂದಿದ್ದವು. ಈ ಹಿನ್ನೆಲೆಯಲ್ಲಿ ಉಪಲೋಕಾಯುಕ್ತರು ದಿಢೀರ್ ಭೇಟಿ ನೀಡಿ ಕಡತಗಳನ್ನು ಪರಿಶೀಲನೆ ನಡೆಸಿದರು.

ಸಾರ್ವಜನಿಕರಿಗೆ ಪಹಣಿ ಹಾಗೂ ಖಾತೆ ಮಾಡಿಕೊಡಲು ಯಾಕೆ ವಿಳಂಬ ನೀತಿ ಅನುಸರಿಸುತ್ತಿದ್ದೀರಿ? ಈ ಬಗ್ಗೆ ತನಿಖೆ ನಡೆಸಬೇಕು ಎಂದು ಎನ್. ಆನಂದ್ ಸೂಚನೆ ನೀಡಿದರು. ಉಪಲೋಕಾಯುಕ್ತರ ಭೇಟಿ ಸಮಯದಲ್ಲಿ ಆನೇಕಲ್ ತಾಲೂಕು ಕಚೇರಿಯಲ್ಲಿರುವ ಅಧಿಕಾರಿಗಳು ಬರದಿರುವುದನ್ನು ಕಂಡು ಅಧಿಕಾರಿಗಳಿಗೆ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ಇದೇ ವೇಳೆ ಸ್ಥಳದಲ್ಲಿದ್ದ ಸಾರ್ವಜನಿಕರು ಆನೇಕಲ್ ತಾಲೂಕು ಕಚೇರಿಯಲ್ಲಿ ರೈತರ ಸಾರ್ವಜನಿಕರ ಕೆಲಸಗಳು ನಡೆಯುತ್ತಿಲ್ಲ ಕೇಸ್ ವರ್ಕರ್, ಸರ್ವೆಯರ್ ಗಳು ಹಾಗೂ ಇತರೆ ಅಧಿಕಾರಿಗಳು ಹಣ ಪಡೆದು ಕೆಲಸ ಮಾಡಿಕೊಡುತ್ತಾರೆ ಎಂದು ದೂರಿದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಉಪಲೋಕಾಯುಕ್ತರು, ದೂರು ಪಡೆದು ಇದರ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

Comments

Leave a Reply

Your email address will not be published. Required fields are marked *