ನಾನು ಬಡವ ಎಂದರು ತಳ್ಳುವ ಗಾಡಿಯಿಂದ ಪಪ್ಪಾಯಿ ಹಣ್ಣುಗಳನ್ನು ಬಿಸಾಡಿದ್ಲು!

ಭೋಪಾಲ್: ಕಾರಿಗೆ ತಳ್ಳು ಗಾಡಿ ತಾಗಿದ್ದಕ್ಕೆ ಕೋಪಗೊಂಡು ಮಹಿಳೆಯೊಬ್ಬಳು ಪಪ್ಪಾಯಿ ಹಣ್ಣುಗಳನ್ನು ಬಿಸಾಡಿದ ವೀಡಿಯೋ ವೈರಲ್ ಆಗಿದೆ.

ವೀಡಿಯೋದಲ್ಲಿ ಏನಿದೆ?: ಕಾರಿಗೆ ತಳ್ಳು ಗಾಡಿ ತಾಗಿದ್ದರಿಂದ ಕೋಪಗೊಂಡ ಮಹಿಳೆ ಹಣ್ಣು ವ್ಯಾಪಾರಿಯ ಗಾಡಿಯಿಂದ ಪಪ್ಪಾಯಿ ಹಣ್ಣುಗಳನ್ನು ರಸ್ತೆಗೆ ಎಸೆಯುತ್ತಿರುವುದನ್ನು ಕಾಣಬಹುದು. ಡಿಕ್ಕಿ ಹೊಡೆದಿದ್ದಕ್ಕೆ ಹಣ್ಣು ಮಾರಾಟಗಾರನೊಂದಿಗೆ ಜಗಳವಾಡಿದ ಆಕೆ ಬಳಿಕ ಗಾಡಿಯಲ್ಲಿದ್ದ ಪಪ್ಪಾಯಿ ಹಣ್ಣುಗಳನ್ನು ಬೀಸಾಕಿದ್ದಾಳೆ. ಮಾರಾಟಗಾರ ನಾನು ಬಡವ ಎಂದು ಬೇಡಿಕೊಂಡು, ಮನವಿ ಮಾಡಿದ್ರ ಮಹಿಳೆ ಮನಸ್ಸು ಮಾತ್ರ ಕರಗಿಲ್ಲ. ಇದನ್ನೂ ಓದಿ: ಅಯೋಧ್ಯೆಯ ರಾಮಮಂದಿರಕ್ಕೆ 400 ಕೆಜಿಯ ಬೀಗ ದೇಣಿಗೆ!

ಮಹಿಳೆ ತನ್ನ ಕಾರನ್ನು ಪಾಕಿರ್ಂಗ್‍ನಿಂದ ಹೊರತೆಗೆದು ರಸ್ತೆಗೆ ಬರುತ್ತಿದ್ದಂತೆ ತಳ್ಳು ಗಾಡಿ ಆಕೆಯ ಕಾರಿನ ಪಕ್ಕದಲ್ಲಿ ಹಾದುಹೋಗುತ್ತಿತ್ತು. ಆಗ ಆಕೆಯ ಕಾರಿನ ಹಿಂಭಾಗಕ್ಕೆ ಹಣ್ಣಿನ ಗಾಡಿ ತಾಗಿತು. ತನ್ನ ಕಾರಿಗೆ ಸ್ಕ್ರಾಚ್ ಆಗಿದ್ದನ್ನು ನೋಡಿದ ಮಹಿಳೆ ಕೋಪಗೊಂಡು ಆ ಗಾಡಿಯಲ್ಲಿದ್ದ ಹಣ್ಣುಗಳನ್ನು ಬಿಸಾಡಿದ್ದಾಳೆ. ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದನ್ನೂ ಓದಿ:  ಜಿಎಸ್‍ಟಿ ನೋಟಿಸ್‌ನಲ್ಲಿ ಮೊತ್ತ ನೋಡಿ ಶಾಕ್ ಆದ ದಂಪತಿ!

Comments

Leave a Reply

Your email address will not be published. Required fields are marked *