ಯುಗಾದಿ ಹಬ್ಬದ ನಿಮಿತ್ತ ಜೊಲ್ಲೆ ದಂಪತಿ ಭರ್ಜರಿ ಪ್ರಚಾರ!

ಬೆಳಗಾವಿ(ಚಿಕ್ಕೋಡಿ): ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಇಂದು ಭರ್ಜರಿ ಪ್ರಚಾರ ಆರಂಭಿಸಿದ್ದು, ಅವರಿಗೆ ಪತ್ನಿ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಕೂಡ ಯುಗಾದಿ ಹಬ್ಬದ ದಿನಂದಂದು ಸಾಥ್ ನೀಡಿದ್ದಾರೆ.

ಭರ್ಜರಿ ಪ್ರಚಾರದ ನಡುವೆಯೇ ಯುಗಾದಿ ಹಬ್ಬದ ನಿಮಿತ್ತ ಇಂದು ಜೊಲ್ಲೆ ದಂಪತಿ ಟೆಂಪಲ್ ರನ್ ನಡೆಸಿದ್ದಾರೆ. ರಾಯಬಾಗ ತಾಲೂಕಿನ ಸುಪ್ರಸಿದ್ದ ಚಿಂಚಲಿ ಮಾಯಕ್ಕ ದೇವಿ ದೇವಾಲಯ, ಮುಗಳಖೋಡ ಮಠ, ನಿಡಸೋಷಿ ದುರದುಂಡೇಶ್ವರ ಮಠ ಹಾಗೂ ಅಲಕನೂರು ಅರಣ್ಯಸಿದ್ದೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಜೊಲ್ಲೆ ದಂಪತಿ ದರ್ಶನ ಪಡೆದರು.

ಶಾಸಕ ಪಿ. ರಾಜೀವ್ ಹಾಗೂ ಕುಡಚಿ ಕ್ಷೇತ್ರದ ಮುಖಂಡರ ಮನೆಗಳಿಗೆ ಭೇಟಿ ನೀಡಿ, ಜೋಡಿಯಾಗಿ ಮತಯಾಚನೆ ನಡೆಸಿದರು. ಅಲ್ಲದೆ ಈ ಬಾರಿ ಚುನಾವಣೆಯಲ್ಲಿ ತಮಗೆ ಬೆಂಬಲ ನೀಡುವಂತೆ ಕ್ಷೇತ್ರದ ಮತದಾರರ ಬಳಿ ಮನವಿ ಮಾಡಿಕೊಂಡರು.

Comments

Leave a Reply

Your email address will not be published. Required fields are marked *