ರಾಜ್ಯದಲ್ಲಿ ಮತ್ತೋರ್ವ ಹಿಂದೂ ಕಾರ್ಯಕರ್ತನ ಕೊಲೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಬುಧವಾರದಂದು ಕ್ಷುಲ್ಲಕ ಕಾರಣಕ್ಕೆ ಕೋಮ ಗಲಭೆ ನೆಡೆದಾಗ ಘಟನಾ ಸ್ಥಳದಿಂದ ಕಾಣೆಯಾಗಿದ್ದ ಯುವಕ ಇಂದು ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಹೊನ್ನಾವರ ನಿವಾಸಿ 19 ವರ್ಷದ ಪರೇಶ್ ಮೇಸ್ತ ಸಾವನ್ನಪ್ಪಿದ ಯುವಕ. ಪಟ್ಟಣದಲ್ಲಿ ಬುಧವಾರ ಕೋಮುಗಲಭೆ ಉಂಟಾಗಿತ್ತು. ಈ ವೇಳೆ ಪರೇಶ್ ಘಟನಾ ಸ್ಥಳದಿಂದ ನಾಪತ್ತೆಯಾಗಿದ್ದರು. ಇಂದು ಗಲಭೆ ನಡೆದ ಶನಿ ದೇವಸ್ಥಾನದ ಬಳಿ ಇರುವ ಶಟ್ಟಿ ಕೆರೆಯಲ್ಲಿ ಪರೇಶ್ ಶವ ಪತ್ತೆಯಾಗಿದೆ.

ದುಷ್ಕರ್ಮಿಗಳು ಕೈಕಟ್ಟಿ ಹಲ್ಲೆ ಮಾಡಿ ಕೊಲೆ ಮಾಡಿ ನಂತರ ಶವವನ್ನು ಕೆರೆಗೆ ಎಸೆದು ಹೋಗಿದ್ದಾರೆ ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಹೊನ್ನಾವರ ಪೊಲೀಸರು ಆಗಮಿಸಿ ಶವವನ್ನು ಮೇಲಕ್ಕೆತಿದ್ದು ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಈ ಸಂಬಂಧ ಸಂಬಂಧ ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

https://twitter.com/ShobhaBJP/status/938988228819877889

https://twitter.com/ShobhaBJP/status/938984145786507264

Comments

Leave a Reply

Your email address will not be published. Required fields are marked *