ಶರತ್ ಅಂತ್ಯಕ್ರಿಯೆಗೂ ಮುನ್ನ ಬಂಟ್ವಾಳದಲ್ಲಿ ಮತ್ತೊಂದು ಚಾಕು ಇರಿತ!

ಮಂಗಳೂರು: ಆರ್‍ಎಸ್‍ಎಸ್ ಕಾರ್ಯಕರ್ತ ಶರತ್ ಮಡಿವಾಳ ಅಂತ್ಯಕ್ರಿಯೆಗೂ ಮುನ್ನ ದಕ್ಷಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಮತ್ತೊಂದು ಚಾಕು ಇರಿತವಾಗಿರೋ ಘಟನೆ ನಡೆದಿದೆ.

ಚಾಕು ಇರಿತಕ್ಕೊಳಗಾದ ವ್ಯಕ್ತಿಯನ್ನು ರಿಯಾಜ್(26) ಎಂದು ಗುರುತಿಸಲಾಗಿದೆ. ಇವರು ದಕ್ಷಿಣ ಕನ್ನಡ ಜಿಲ್ಲೆಯ ಇರ್ವತ್ತೂರು ಪದವು ನಿವಾಸಿ. ಶರತ್ ಮಡಿವಾಳ ಪಾರ್ಥಿವ ಶರೀರ ಹೋದ ಬಳಿಕ ಬಂಟ್ವಾಳದ ಬಿ.ಸಿ ರೋಡಿನ ಕೈಕಂಬದ ಬಳಿ ಈ ಘಟನೆ ನಡೆದಿದೆ.

ಶರತ್ ಅಂತ್ಯಕ್ರಿಯೆಗೆಂದು ಮಂಗಳೂರಿನಿಂದ ಬಂಟ್ವಾಳದಲ್ಲರೋ ಅವರ ನಿವಾಸಕ್ಕೆ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾಗುತ್ತಿತ್ತು. ಈ ಸಂದರ್ಭದಲ್ಲಿ ಕಲ್ಲು ತೂರಾಟ, ಲಾಠಿಪ್ರಹಾರ ನಡೆದಿದ್ದು, ಇದೇ ವೇಳೆ 7 ರಿಂದ 8 ಮಂದಿ ದುಷ್ಕರ್ಮಿಗಳು ರಿಯಾಜ್ ಕುತ್ತಿಗೆ ಹಾಗೂ ಹೆಗಲ ಭಾಗಕ್ಕೆ ಚಾಕುವಿನಿಂದ ಇರಿದಿದ್ದಾರೆ ಎನ್ನಲಾಗಿದೆ.

ಸದ್ಯ ರಿಯಾಜ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಅಂತಾ ಆಸ್ಪತ್ರೆ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ರಕ್ತದ ಮಡುವಲ್ಲಿ ಬಿದ್ದಿದ್ದ ಶರತ್‍ನನ್ನ ಆಸ್ಪತ್ರೆಗೆ ಸೇರಿಸಿದ್ದು ಮುಸ್ಲಿಂ ಯುವಕ

ಇದನ್ನೂ ಓದಿ: ನನ್ನ ಮಗನನ್ನ ಯಾವ ರಾಜಕಾರಣಿಗಳು, ಸಂಘಟನೆಯವ್ರು ಉಳಿಸಲಿಲ್ಲ: ಶರತ್ ತಂದೆ ಕಣ್ಣೀರು

https://www.youtube.com/watch?v=o40hIeKFh8E

https://www.youtube.com/watch?v=bHr6olvlgmU

Comments

Leave a Reply

Your email address will not be published. Required fields are marked *