RSS ಬ್ಯಾನ್ ವಿಚಾರ – ಸಿದ್ದರಾಮಯ್ಯಗೆ ತಲೆಕೆಟ್ಟಿದೆ ಎಂದು ಅಪ್ಪಚ್ಚು ರಂಜನ್ ಕಿಡಿ

ಮಡಿಕೇರಿ: ಪಿಎಫ್‍ಐ (PFI) ಸಂಘಟನೆ ಬ್ಯಾನ್ ಮಾಡಿದ ಹಾಗೆ ಆರ್‌ಎಸ್‍ಎಸ್ (RSS) ಸಂಘಟನೆಯನ್ನು ಬ್ಯಾನ್ ಮಾಡಬೇಕು ಎಂಬ ಸಿದ್ದರಾಮಯ್ಯ (Siddaramaiah) ಹೇಳಿಕೆಗೆ ಅವರಿಗೆ ತಲೆ ಕೆಟ್ಟಿದೆ, ಅವರನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು ಎಂದು ಹೇಳುವ ಮೂಲಕ ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ (Appachhu Ranjan) ತಿರುಗೇಟು ನೀಡಿದ್ದಾರೆ.

ಮಡಿಕೇರಿಯಲ್ಲಿ (Madikeri) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರ್‌ಎಸ್‍ಎಸ್‍ನಲ್ಲಿ ರಾಷ್ಟ್ರೀಯ ಚಿಂತನೆ ತೊಡಗಿದೆ. ನಾವು ಕೂಡ ಆರ್‌ಎಸ್‍ಎಸ್‍ನಿಂದ ಬಂದವರು. ಆರ್‌ಎಸ್‍ಎಸ್ ಕಲಿಸುವುದು ದೇಶ ಪ್ರೇಮ ಹಾಗೂ ದೇಶ ಭಕ್ತಿಯನ್ನು, ದೇಶ ಒಡೆಯುವ ಕೆಲಸವನ್ನು ಆರ್‌ಎಸ್‍ಎಸ್ ಮಾಡುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ತಾನು ಎರಡನೇ ಪತ್ನಿ ಅಂತಾ ಗೊತ್ತಾಗ್ತಿದ್ದಂತೆಯೇ ಮುಂಜಾನೆ ನೇಣಿಗೆ ಶರಣಾದ ನವವಧು!

ಆರ್‌ಎಸ್‍ಎಸ್ ಯಾವುದೇ ಬಾಂಬ್ ಹಾಕಲು ಕೂಡ ಕಲಿಸುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಗೆಲ್ಲಲು ಸಿದ್ದರಾಮಯ್ಯ ಹೀಗೆ ಅರ್ಥವಿಲ್ಲದ ಮಾತುಗಳನ್ನು ಆಡುತ್ತಿದ್ದಾರೆ. ಸಿದ್ದರಾಮಯ್ಯರ ಮಾತನ್ನು ಯಾರು ಕೂಡ ಒಪ್ಪುವುದಿಲ್ಲ. ಈಗಾಗಲೇ ಮಾಧ್ಯಮಗಳಲ್ಲಿ ಸಾಕಷ್ಟು ಜನರು ಪಿಎಫ್‍ಐ ಬ್ಯಾನ್ ಆಗಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಾವು ಕೇಂದ್ರ ಸರ್ಕಾರಕ್ಕೆ ಅಭಿನಂದನೆಗಳನ್ನು ಜಿಲ್ಲೆಯ ಪರವಾಗಿ ಹೇಳುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮುಂದಿನ ವರ್ಷದಿಂದ ಕಾರುಗಳಲ್ಲಿ 6 ಏರ್‌ಬ್ಯಾಗ್ ನಿಯಮ ಜಾರಿಗೆ – ನಿತಿನ್ ಗಡ್ಕರಿ

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *