ಮಾನವೀಯತೆ ಮೆರೆದ ಗೃಹ ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ: ತೀರ್ಥಹಳ್ಳಿ (Thirthahalli) ತಾಲೂಕಿನ ಬೇಗುವಳ್ಳಿ ಸಮೀಪ ಬೈಕ್ ಅಪಘಾತದಲ್ಲಿ (Bike Accident) ಗಾಯಗೊಂಡಿದ್ದ ಯುವಕನನ್ನು ತಮ್ಮ ಬೆಂಗಾವಲು ವಾಹನದಲ್ಲಿ ಆಸ್ಪತ್ರೆಗೆ ಕಳುಹಿಸಿ ಕೊಡುವ ಮೂಲಕ ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಮಾನವೀಯತೆ ಮೆರೆದಿದ್ದಾರೆ.

ರಸ್ತೆಯಲ್ಲಿ ಹಸು ಅಡ್ಡ ಬಂದ ಪರಿಣಾಮ, ಹಸುವಿಗೆ ಬೈಕ್ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಸವಾರ ಬಿದ್ದು ಗಂಭೀರ ಗಾಯಗೊಂಡಿದ್ದಾನೆ. ಗಾಯಗೊಂಡಿದ್ದ ಯುವಕನನ್ನು ಸಿಂಗನಬಿದರೆ ಹಳಗ ಗ್ರಾಮದ ನಿವಾಸಿ ಎನ್ನಲಾಗಿದೆ. ಇದನ್ನೂ ಓದಿ: ಬೇನಾಮಿ ಆಸ್ತಿ ಗಳಿಕೆ- ಸುನಿಲ್ ಕುಮಾರ್ ವಿರುದ್ಧ ಲೋಕಾಯುಕ್ತಕ್ಕೆ ಮುತಾಲಿಕ್ ದೂರು

ರಸ್ತೆ ಬದಿಯಲ್ಲಿ ಗಾಯಾಳು ಯುವಕ ನರಳುತ್ತಿದ್ದ. ಈ ವೇಳೆ ಅದೇ ಮಾರ್ಗದಲ್ಲಿ ಬೆಂಗಳೂರಿಗೆ ಹೊರಟಿದ್ದ ಸಚಿವ, ಗಾಯಾಳು ಯುವಕನನ್ನು ಗಮನಿಸಿ ತಮ್ಮ ವಾಹನ ನಿಲ್ಲಿಸಿದ್ದಾರೆ. ಗಾಯಾಳು ಯುವಕನನ್ನು ಉಪಚರಿಸಿ, ಧೈರ್ಯ ಹೇಳಿದ್ದಾರೆ. ಅಲ್ಲದೇ ತಮ್ಮ ಬೆಂಗಾವಲು ವಾಹನದಲ್ಲಿ  (escort vehicle) ಗಾಯಾಳು ಯುವಕನನ್ನು ಆಸ್ಪತ್ರೆಗೆ ಕಳುಹಿಸಿ ಕೊಟ್ಟಿದ್ದಾರೆ. ಇದನ್ನೂ ಓದಿ: ನಿಮ್ಮ ಕಾಲಿಗೆ ಬೀಳ್ತಿನಿ, ಟಿಕೆಟ್ ಕೊಡಿ- ಸಮಾರಂಭದಲ್ಲಿ ಮಂಡಿಯೂರಿ ಮಾಜಿ ಶಾಸಕನ ಅಳಲು

Comments

Leave a Reply

Your email address will not be published. Required fields are marked *