ನಿತಿನ್ ಗಡ್ಕರಿ ಜೊತೆ ಕ್ಷಮೆ ಕೇಳಿದ ಕೇಜ್ರಿವಾಲ್

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಲ್ಲಿ ಕ್ಷಮೆ ಕೇಳಿದ್ದಾರೆ.

ಈ ಮೂಲಕ ಪಟಿಯಾಲ ಹೌಸ್ ಕೋರ್ಟ್ ನಲ್ಲಿ ಬಾಕಿ ಇರುವ ಮಾನಹಾನಿ ಕೇಸ್ ಹಿಂಪಡೆಯುವ ಸಲುವಾಗಿ ಗಡ್ಕರಿ ಜತೆಗಿನ ಜಂಟಿ ಹೇಳಿಕೆಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

“ಸತ್ಯಾಂಶಗಳನ್ನು ಪರಿಶೀಲಿಸದೆಯೇ ನಾನು ನಿಮ್ಮ ವಿರುದ್ಧ ಮಾಡಿರುವ ಆರೋಪಗಳಿಗೆ ವಿಷಾದ ವ್ಯಕ್ತಪಡಿಸಿ ಕ್ಷಮೆಯಾಚಿಸುತ್ತೇನೆ. ದಯವಿಟ್ಟು ಈ ಹಿಂದೆ ನಡೆದ ಘಟನೆಗಳನ್ನು ಮರೆತು ಬಿಡಿ” ಎಂದು ಸಚಿವ ಗಡ್ಕರಿ ಅವರಿಗೆ ಕೇಜ್ರಿವಾಲ್ ಪತ್ರ ಬರೆದಿದ್ದಾರೆ.

ಲೋಕಸಭಾ ಚುನಾವಣೆಗೂ ಮುನ್ನ ಗಡ್ಕರಿ ಅವರನ್ನು ಉದ್ದೇಶಿಸಿ, ಕೇಜ್ರಿವಾಲ್ ದೇಶದ ಅತಿ ದೊಡ್ಡ ಭ್ರಷ್ಟಾಚಾರಿ ಎಂದು ಆರೋಪಿಸಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಗಡ್ಕರಿ ಮಾನಹಾನಿ ಕೇಸ್ ಹಾಕಿದ್ದರು.

ಪಂಜಾಬ್ ಮಾಜಿ ಕಂದಾಯ ಸಚಿವ ಬಿಕ್ರಂ ಸಿಂಗ್ ಮಜೀತಿಯ ಅವರಲ್ಲಿ ಕಳೆದ ವಾರ ಅರವಿಂದ ಕೇಜ್ರಿವಾಲ್ ಅವರು ಕ್ಷಮೆಯಾಚಿಸಿ ಅವರೊಂದಿಗಿನ ಮಾನಹಾನಿ ಕೇಸ್ ಕೋರ್ಟಿನಲ್ಲಿ ಇತ್ಯರ್ಥಪಡಿಸಿಕೊಂಡಿದ್ದರು.

ಕೇಜ್ರಿವಾಲ್ ವಿರುದ್ಧ 33 ಮಾನನಷ್ಟ ಕೇಸ್ ಗಳು ದಾಖಲಾಗಿದ್ದು, ಈ ಎಲ್ಲ ಕೇಸ್ ಗಳನ್ನು ಹಿಂದಕ್ಕೆ ಪಡೆಯಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ತಾನು ಮಾಡಿದ ಆರೋಪಗಳಿಗೆ ಕ್ಷಮೆ ಕೇಳುವ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಲು ಮುಂದಾಗಿದ್ದಾರೆ ಎಂದು ಮಾಧ್ಯಮವೊಂದು ವರದಿ ಪ್ರಕಟಿಸಿದೆ.


Comments

Leave a Reply

Your email address will not be published. Required fields are marked *