ಮರೆಯದ ಮಾಣಿಕ್ಯನಿಗೆ ನನ್ನದೊಂದು ನಮನ: ಕನ್ನಡದಲ್ಲಿಯೇ ಕೇಜ್ರಿವಾಲ್ ಟ್ವೀಟ್

ನವದೆಹಲಿ: ಸ್ಯಾಂಡಲ್‌ವುಡ್‌ (Sandalwood) ಪವರ್ ಸ್ಟಾರ್ ಡಾ. ಪುನೀತ್ ರಾಜ್ ಕುಮಾರ್ (PowerStar Puneeth Raj Kumar) ಅವರು ನಮ್ಮನ್ನು ಅಗಲಿ ಇಂದಿಗೆ ಒಂದು ವರ್ಷವಾಯಿತು. ಈ ಹಿನ್ನೆಲೆಯಲ್ಲಿ ರಾಜಕೀಯ ನಾಯಕರು, ಗಣ್ಯರು ಹಾಗೂ ಅಭಿಮಾನಿಗಳು ಸೇರಿದಂತೆ ಎಲ್ಲರೂ ಅಪ್ಪುವನ್ನು ಪ್ರತನಿತ್ಯದಂತೆ ಇಂದು ಕೂಡ ಸ್ಮರಿಸಿಕೊಂಡಿದ್ದಾರೆ. ಈ ಮಧ್ಯೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಕೂಡ ಅಪ್ಪುವನ್ನು ನೆನಪು ಮಾಡಿಕೊಂಡಿದ್ದು, ಗಮನಸೆಳೆದಿದೆ.

ಹೌದು. ಕನ್ನಡದಲ್ಲಿಯೇ ಟ್ವೀಟ್ ಮಾಡಿರುವ ಕೇಜ್ರಿವಾಲ್, ಮರೆಯದ ಮಾಣಿಕ್ಯನಿಗೆ ನನ್ನದೊಂದು ನಮನಗಳು ಎಂದು ಬರೆದುಕೊಂಡಿದ್ದಾರೆ. ಅಲ್ಲದೆ ಡಾ ಪುನೀತ್ ರಾಜ್‍ಕುಮಾರ್ ಅವರ ಪುಣ್ಯತಿಥಿಯಾಗಿರುವ ಇಂದು ಅವರನ್ನು ನಾನು ನೆನಪಿಸಿಕೊಳ್ಳುತ್ತೇನೆ. ಅವರು ನಟಿಸಿರುವ ಸಿನಿಮಾ, ಹಾಡುಗಳು ಮತ್ತು ಸಾಮಾಜಿಕ ಕಾರ್ಯಗಳು ಅವರು ನಮ್ಮನ್ನು ಎಂದಿಗೂ ಬಿಟ್ಟು ಹೋಗಿಲ್ಲ ಎಂದು ಅನಿಸುತ್ತದೆ. ಅವರು ಯಾವತ್ತೂ ಪವರ್ ಸ್ಟಾರ್ ಆಗಿಯೇ ಇರುತ್ತಾರೆ ಎಂದು ತಿಳಿಸಿದ್ದಾರೆ.

ಕಳೆದ ವರ್ಷ ಅಕ್ಟೋಬರ್ 29ರಂದು ಹೃದಯ ಸ್ತಂಭನಕ್ಕೆ ಒಳಗಾಗಿ ಅಪ್ಪು ಅವರು ನಗರದ ವಿಕ್ರಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ಅಪ್ಪು ನಮ್ಮನ್ನು ಅಗಲಿ ಇಂದಿಗೆ ಒಂದು ವರ್ಷವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಅಪ್ಪು ಸಮಾಧಿಯತ್ತ ಅಭಿಮಾನಿಗಳ ದಂಡೇ ಹರಿದುಬರುತ್ತಿದೆ. ಇಂದು ರಾಜ್ ಕುಮಾರ್ ಕುಟುಂಬಸ್ಥರು ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಅಲ್ಲದೆ ಬೆಳಗ್ಗಿಂದ ಸಂಜೆಯವರೆಗೂ ಅಭಿಮಾನಿಗಳಿಗೆ ಅನ್ನಸಂತರ್ಪನೆ ಕೂಡ ನಡೆಯುತ್ತಿದೆ.

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *