ಸಾಲು ಸಾಲು ರಜೆ: ಶನಿವಾರ ಒಂದೇ ದಿನ ತಿರುಪತಿ ಹುಂಡಿಯಲ್ಲಿ ಬಿದ್ದ ಕಾಣಿಕೆ ಎಷ್ಟು ಗೊತ್ತಾ?

ತಿರುಪತಿ: ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ತಿರುಪತಿ ದೇವಾಲಯದದಲ್ಲಿ ಶನಿವಾರ ಒಂದೇ ದಿನ ಹುಂಡಿಯಲ್ಲಿ 3 ಕೋಟಿಗೂ ಅಧಿಕ ಹಣ ಸಂಗ್ರಹವಾಗಿದೆ.

93 ಸಾವಿರಕ್ಕೂ ಹೆಚ್ಚು ಭಕ್ತರು ಶನಿವಾರ ತಿರುಪತಿ ದೇವಾಲಯಕ್ಕೆ ಭೇಟಿ ನೀಡಿದ್ದು, ರೈಲ್ವೇ ನಿಲ್ದಾಣ ಮತ್ತು ಬಸ್ ನಿಲ್ದಾಣದಲ್ಲಿ ವಿಪರೀತ ಜನ ದಟ್ಟನೆ ಇತ್ತು. ಶನಿವಾರ ಒಂದೇ ದಿನ 3 ಕೋಟಿ ರೂ. ಹಣ ಹುಂಡಿಗೆ ಬಿದ್ದಿದ್ದು, ಎಣಿಕೆ ಕಾರ್ಯ ಮುಂದುವರಿಯುತ್ತಿದೆ ಎಂದು ಟಿಟಿಡಿ ಮೂಲಗಳನ್ನು ಆಧರಿಸಿ ಮಾಧ್ಯಮವೊಂದು ವರದಿ ಮಾಡಿದೆ.

ರೈಲ್ವೇ ಮುಂಗಡ ಬುಕ್ಕಿಂಗ್, ಬಸ್ ಬುಕ್ಕಿಂಗ್, ವಿಚರಣೆ ಕೊಠಡಿಯಲ್ಲಿ ಸಮಸ್ಯೆ ಸೃಷ್ಟಿಯಾಗಿತ್ತು. ಸಂಖ್ಯೆ ಜಾಸ್ತಿಯಾಗಿದ್ದ ಹಿನ್ನೆಲೆಯಲ್ಲಿ ಜನರನ್ನು ನಿಯಂತ್ರಿಸಲು ಅಧಿಕಾರಿಗಳು ಪೊಲೀಸರು ಹರಸಾಹಸ ಪಟ್ಟಿದ್ದರು. ದೀರ್ಘ ರಜೆ ರುವ ಹಿನ್ನೆಲೆಯಲ್ಲಿ ಭಕ್ತರು ಜಾಸ್ತಿ ಸಂಖ್ಯೆಯಲ್ಲಿ ಬರುವ ಮಾಹಿತಿ ಇದ್ದರೂ ಭಾರತೀಯ ರೈಲ್ವೇ ಯಾವುದೇ ವಿಶೇಷ ರೈಲನ್ನು ಓಡಿಸದ್ದಕ್ಕೆ ಪ್ರಯಾಣಿಕರು ತಮ್ಮ ಅಸಮಾಧಾನವನ್ನು ಹೊರಹಾಕಿದರು.

ಬೆಂಗಳೂರು ಮತ್ತು ಚೆನ್ನೈ ಕಡೆಯಿಂದ ಜಾಸ್ತಿ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು. ಜನ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಈ ಕಡೆಯಲ್ಲಿ ಹೆಚ್ಚುವರಿ ಬಸ್ ಗಳನ್ನು ಹಾಕಲಾಯಿತು. ಬಹಳಷ್ಟು ಪ್ರಯಾಣಿಕರು ಸ್ಥಳದಲ್ಲಿ ಮುಂಗಡ ಬುಕ್ಕಿಂಗ್ ಮಾಡಲು ಬಂದಿದ್ದರು ಎಂದು ಆಂಧ್ರಪ್ರದೇಶ ಸಾರಿಗೆ ಇಲಾಖೆಯ ಟ್ರಾಫಿಕ್ ಮ್ಯಾನೇಜರ್ ಭಾಸ್ಕರ್ ರೆಡ್ಡಿ ತಿಳಿಸಿದರು.

ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ನಗರದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ನಿಯೋಜಿಸಲಾಗಿತ್ತು. ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗಿದ್ದರಿಂದ ನಗರದಲ್ಲಿ ವಿಪರೀತ ಟ್ರಾಫಿಕ್ ಸಮಸ್ಯೆಯಾಗಿತ್ತು.

ಇದನ್ನೂ ಓದಿ: ತಿರುಪತಿ ದೇಗುಲಕ್ಕೆ ತೆಲಂಗಾಣದಿಂದ ಚಿನ್ನ ಕಾಣಿಕೆ: ಎಷ್ಟು ಚಿನ್ನ? ಬೆಲೆ ಎಷ್ಟು?

Comments

Leave a Reply

Your email address will not be published. Required fields are marked *