ವಾಜಪೇಯಿ ಮಾಡದ ಕೆಲಸವನ್ನು ಮೋದಿ ಮಾಡಿದ್ದಾರೆ- ಕೆ.ಎಸ್.ಭಗವಾನ್

– ಮೋದಿ ಹಾಡಿ ಹೊಗಳಿದ ಭಗವಾನ್

ಮೈಸೂರು: ಯಾವಾಗಲೂ ಬಿಜೆಪಿ ಹಾಗೂ ನರೇಂದ್ರ ಮೋದಿ ಅವರನ್ನು ಬಾಯಿಗೆ ಬಂದಂತೆ ಟೀಕಿಸುತ್ತಿದ್ದ ವಿಚಾರವಾದಿ ಪ್ರೊ.ಕೆ.ಎಸ್.ಭಗವಾನ್ 370ನೇ ವಿಧಿ ರದ್ದು ಪಡಿಸಿದ ಕೇಂದ್ರದ ನಿರ್ಧಾರ ಹಾಗೂ ಪ್ರಧಾನಿಯನ್ನು ಹಾಡಿ ಹೊಗಳಿದ್ದಾರೆ.

ಜಮ್ಮು ಕಾಶ್ಮೀರ ವಿಚಾರದಲ್ಲಿ ಕೇಂದ್ರ ಸರ್ಕಾರದ ನಿರ್ಧಾರದ ಕುರಿತು ಪ್ರತಿಕ್ರಿಯಿಸಿದ ಅವರು, ಒಳ್ಳೆ ಕೆಲಸ ಮಾಡಿದರೆ ಅದನ್ನು ಮೆಚ್ಚಬೇಕು. ನಮ್ಮ ಪ್ರಧಾನಿ ಮೋದಿ ಒಳ್ಳೆಯ ಕೆಲಸ ಮಾಡಿದ್ದಾರೆ. ವಾಜಪೇಯಿ ಮಾಡದಂತ ಕೆಲಸವನ್ನು ಮೋದಿ ಮಾಡಿದ್ದಾರೆ. ಇದಕ್ಕೆ ನಾನು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದೇನೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಜಮ್ಮು-ಕಾಶ್ಮೀರಕ್ಕೆ ಇದ್ದ ವಿಶೇಷ ಸ್ಥಾನಮಾನವನ್ನು ರದ್ದು ಮಾಡಿರುವುದು ಸ್ವಾಗತಾರ್ಹ ಕೆಲಸ. ಇದರಿಂದ ದೇಶದಲ್ಲಿ ಸಮಾನತೆ ಉಂಟಾಗಿದೆ, ಖರ್ಚುವೆಚ್ಚಗಳು ಕಡಿಮೆಯಾಗಿದೆ. ಆದರೆ, ರಾಮ ಮಂದಿರ ನಿರ್ಮಾಣ ವಿಚಾರದಲ್ಲಿ ನನ್ನ ವಿರೋಧವಿದೆ ಎಂದು ಇದೇ ವೇಳೆ ಸ್ಪಷ್ಟ ಪಡಿಸಿದರು.

ಒಳ್ಳೆ ಕೆಲಸಗಳನ್ನು ನಮ್ಮ ಪ್ರಧಾನಿ ಮಾಡಲಿ, ಬಡವರ ಪರವಾಗಿ, ಉದ್ಯೋಗ ಸೃಷ್ಟಿಯ ಬಗ್ಗೆ ಮೋದಿ ಗಮನಹರಿಸಿಬೇಕು ಎಂದು ಪ್ರೋ.ಕೆ.ಎಸ್.ಭಗವಾನ್ ಆಶಯ ವ್ಯಕ್ತಪಡಿಸಿದ್ದಾರೆ.

Comments

Leave a Reply

Your email address will not be published. Required fields are marked *