ಆಕಸ್ಮಿಕ ಬೆಂಕಿ ಅವಘಡ – ಆಟೋಮೊಬೈಲ್ ಅಂಗಡಿ ಅಗ್ನಿಗಾಹುತಿ

Automobile Store

ರಾಯಚೂರು: ನಗರದ ಗೋಶಾಲೆ ರಸ್ತೆಯಲ್ಲಿರುವ ಜನತಾ ಆಟೋಮೊಬೈಲ್ಸ್ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ.  ಇದನ್ನೂ ಓದಿ: ಬೀದರ್‌ನಲ್ಲಿ ಖಾಸಗಿ ಅಂಬುಲೆನ್ಸ್‌ಗಳದ್ದೇ ಕಾರ್‌ಬಾರ್ – ಬ್ರಿಮ್ಸ್ ಆಸ್ಪತ್ರೆ ಎದುರೇ ಖಾಸಗಿ ಸುಲಿಗೆ

Automobile Store

ವಿಕ್ರಮ ಸಿಂಗ್‍ರವರಿಗೆ ಸೇರಿದ ಆಟೋಮೊಬೈಲ್ಸ್ ಅಂಗಡಿ ಬೆಂಕಿ ಅವಘಡಕ್ಕೆ ತುತ್ತಾಗಿದ್ದು, ಅಂಗಡಿಯಲ್ಲಿನ 60 ರಿಂದ 70 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ವಿದ್ಯುತ್ ಶಾರ್ಟ್ ಸಕ್ರ್ಯೂಟ್‍ನಿಂದ ಬೆಂಕಿ ಹೊತ್ತಿಕೊಂಡಿರಬಹುದೆಂದು ಶಂಕಿಸಲಾಗಿದೆ.  ಇದನ್ನೂ ಓದಿ: ಸೋಲೂರಿನಲ್ಲಿ ದೇಶದಲ್ಲಿಯೇ ಪ್ರಥಮ ಬಾರಿಗೆ ಹುಲ್ಲನ್ನು ಬಳಸಿ ಬಯೋ ಗ್ಯಾಸ್ ತಯಾರು – ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಪ್ರಶಂಸೆ

Automobile Store

ಅಗ್ನಿಶಾಮಕ ದಳದ ಎರಡು ವಾಹನಗಳನ್ನು ಸಂಪೂರ್ಣ ಬೆಂಕಿ ನಾಂದಿಸಲು ಬಳಸಲಾಗಿದೆ. ಬೆಳಗಿನ ಜಾವ 4 ಗಂಟೆ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದೆ. ಅಗ್ನಿಶಾಮಕ ದಳ ಸ್ಥಳಕ್ಕೆ ಬರುವುದರೊಳಗೆ ಎಲ್ಲೆಡೆ ಬೆಂಕಿ ಹರಡಿದ್ದರಿಂದ ಅಪಾರ ಪ್ರಮಾಣದ ಹಾನಿ ಉಂಟಾಗಿದೆ.  ಇದನ್ನೂ ಓದಿ: ಸಾರಿಗೆ ಸಚಿವರ ಸ್ವಕ್ಷೇತ್ರದಲ್ಲೇ ಬಸ್‍ಗಾಗಿ ವಿದ್ಯಾರ್ಥಿಗಳ ಪರದಾಟ- ಡಿಸಿ ವಾಸ್ತವ್ಯ ಹೂಡಿದ್ರೂ ಬಗೆಹರಿಯದ ಸಮಸ್ಯೆ

Comments

Leave a Reply

Your email address will not be published. Required fields are marked *