ಮೊದ್ಲೇ ತಿಳಿಸಿದ್ರೆ ನಾನು ಇಲ್ಲಿಗೆ ಬರ್ತಿರಲಿಲ್ಲ: ಪುತ್ರನ ಮೇಲೆ ಬಿಎಸ್‍ವೈ ಗರಂ!

ನವದೆಹಲಿ: ಮೊದಲೇ ವಿಷಯ ತಿಳಿಸಿದ್ದರೆ ನಾನು ಬೆಂಗಳೂರಿನಿಂದ ದೆಹಲಿಗೆ ಬರುತ್ತಿರಲಿಲ್ಲ. ಸರಿಯಾಗಿ ಕಮ್ಯೂನಿಕೇಟ್ ಮಾಡುವುದಕ್ಕೆ ಆಗಲ್ವಾ ಎಂದು ಬಿಜೆಪಿ ರಾಜ್ಯಾಧ್ಯಾಕ್ಷ ಬಿ.ಎಸ್.ಯಡಿಯೂರಪ್ಪ ಅವರು ಪುತ್ರ ಬಿ.ವೈ.ರಾಘವೇಂದ್ರ ಮೇಲೆ ಗರಂ ಆಗಿದ್ದಾರೆ.

ಇಂದು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ದಕ್ಷಿಣ ಭಾರತದ ಬಿಜೆಪಿ ಸಂಸದರು ಮತ್ತು ರಾಜ್ಯಾಧ್ಯಕ್ಷರ ಸಭೆ ನಿಗದಿಯಾಗಿತ್ತು. ಕಾರಣಾಂತರಗಳಿಂದ ಗುರುವಾರವೇ ಸಭೆಯನ್ನು ರದ್ದುಗೊಳಿಸಲಾಗಿತ್ತು. ಈ ಬಗ್ಗೆ ಮಾಹಿತಿ ಇದ್ದರೂ ಸಂಸದ ಬಿ.ವೈ.ರಾಘವೇಂದ್ರ ತಂದೆಗೆ ವಿಷಯ ತಲುಪಿಸುವಲ್ಲಿ ವಿಫಲವಾಗಿದ್ದರು.

 

ಹೀಗಾಗಿ ವಿಷಯ ತಿಳಿಯದ ಯಡಿಯೂರಪ್ಪ ಇಂದು ಬೆಳಗ್ಗೆ ದೆಹಲಿಗೆ ಬಂದಿಳಿದಿದ್ದಾರೆ. ದೆಹಲಿ ಬರುತ್ತಿದ್ದಂತೆ ಸಭೆ ರದ್ದಾದ ಮಾಹಿತಿ ಪಡೆದ ಯಡಿಯೂರಪ್ಪ ಸರಿಯಾಗಿ ಕಮ್ಯೂನಿಕೇಟ್ ಮಾಡೋದಕ್ಕೆ ಆಗಲ್ವಾ ಎಂದು ಪುತ್ರನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

ಮಾಹಿತಿ ತಿಳಿದ ಕೂಡಲೇ ರಾಘವೇಂದ್ರ ಅವರು ತಂದೆಯನ್ನು ಸಂಪರ್ಕಿಸಲು ಪ್ರಯತ್ನಿಸಿದರಂತೆ. ಆದ್ರೆ ವಿಮಾನದಲ್ಲಿದ್ದರಿಂದ ಸಂಪರ್ಕ ಸಾಧ್ಯವಾಗಲಿಲ್ಲವಂತೆ. ಹೀಗಾಗಿ ದೆಹಲಿಗೆ ಬಂದಿಳಿಯುತ್ತಿದ್ದಂತೆ ತಂದೆಗೆ ಮಾಹಿತಿ ನೀಡಿದ್ದಾರೆ. ಇಂದು ಸಂಜೆ ಯಡಿಯೂರಪ್ಪನವರು ಬೆಂಗಳೂರಿಗೆ ವಾಪಾಸ್ಸು ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *