ಬೆಳಗಾವಿ (ಚಿಕ್ಕೋಡಿ): ನನಗೆ ಕಾಮನ್ ಸೆನ್ಸ್ ಇಲ್ಲ. ಅವರು ಕಲಿಸಿದರೆ ನಾನು ಕಲಿಯುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಗೃಹ ಸಚಿವ ಎಂ.ಬಿ.ಪಾಟೀಲ್ ಅವರಿಗೆ ತಿರುಗೇಟು ನೀಡಿದ್ದಾರೆ.
ನಗರದಲ್ಲಿ ಮಾಧ್ಯಮಗಳ ಮಾತನಾಡಿದ ಅವರು, ಗೃಹ ಸಚಿವ ಎಂ.ಬಿ.ಪಾಟೀಲ್ ಬುದ್ಧಿವಂತರು. ಅವರಿಗೆ ಕಾಮನ್ ಸೆನ್ಸ್ ಇದೆ. ಸಚಿವರು ಟೀಚರ್ ಆಗಿ ಬಂದು ನನಗೆ ಪಾಠ ಮಾಡಿದರೆ ಕಲಿತುಕೊಳ್ಳಲು ಪ್ರಯತ್ನಿಸುತ್ತೇನೆ. ಅವರಿಂದ ಕಲಿಯುವುದು ಬಹಳಷ್ಟಿದೆ. ಕಲಿಸಿದರೆ ಕಲಿಯೋಣ ತೊಂದರೆ ಏನು ಇಲ್ಲ ಎಂದು ವ್ಯಂಗ್ಯವಾಡಿದರು.

ಚಿಕ್ಕೋಡಿ ಕ್ಷೇತ್ರದಿಂದ ಬಿಜೆಪಿಯ ಯಾವ ಅಭ್ಯರ್ಥಿ ಕಣಕ್ಕೆ ಇಳಿಯುತ್ತಾರೆ ಎಂದು ಮಾಧ್ಯಮಗಳು ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಯಾವುದೇ ಅಭ್ಯರ್ಥಿಯನ್ನು ಆಯ್ಕೆ ಮಾಡಲ್ಲ. ಇದು ಹೈಕಮಾಂಡ್ಗೆ ಬಿಟ್ಟ ನಿರ್ಧಾರವಾಗಿದೆ. ಪಕ್ಷದ ರಾಷ್ಟ್ರೀಯ ನಾಯಕರು ರಾಜ್ಯದ 28 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಾರೆ. ಅಂತಿಮ ತೀರ್ಮಾನ ದೆಹಲಿಯಲ್ಲೇ ಆಗುತ್ತದೆ ಎಂದು ಹೇಳಿದರು.
ಚಿಕ್ಕೋಡಿ ತಾಲೂಕಿನ ಚಂದೂರು ಗ್ರಾಮದ ಯೋಧ ಪ್ರವೀಣ ಹುತಾತ್ಮರಾಗಿದ್ದಾರೆ. ಯೋಧ ಪ್ರವೀಣ ಅವರ ಕುಟುಂಬಸ್ಥರಿಗೆ ಸ್ವಾಂತನ ಹೇಳಲು ಚಂದೂರಿಗೆ ಹೋಗುತ್ತಿರುವೆ. ಜೊತೆಗೆ ಚಿಕ್ಕೋಡಿಯಲ್ಲಿ ಆಯೋಜಿಸಿದ್ದ ಮೆರವಣಿಯನ್ನು ರದ್ದು ಮಾಡಲಾಗಿದ್ದು, ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತೇನೆ ಎಂದು ತಿಳಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv

Leave a Reply