ಎತ್ತಿನ ಹೊಳೆ ನೀರು ಬಂತು, ಬಂತು..! ಮೊಯ್ಲಿ ಕನಸಿನಲ್ಲಿ: ಬಚ್ಚೇಗೌಡ ವಾಗ್ದಾಳಿ

ಚಿಕ್ಕಬಳ್ಳಾಪುರ: ಕ್ಷೇತ್ರ ಹಾಲಿ ಸಂಸದರಾಗಿರುವ ವೀರಪ್ಪ ಮೊಯ್ಲಿ ಅವರು ಕಳೆದ 2 ಅವಧಿಗಳಿಂದ ನೀರು ಬಂತು ಬಂತು ಎಂದು ಜನರಿಗೆ ಸುಳ್ಳು ಹೇಳಿದ್ದಾರೆ. ಎತ್ತಿನ ಹೊಳೆ ನೀರು ಅವರ ಕನಸಿನಲ್ಲಿ ಬಂದಿದೆ ಅಷ್ಟೇ. ಆದರೆ ಈ ಬಾರಿ ಮೋದಿ ಸರ್ಕಾರ ಬರುತ್ತೆ, ನಾನು ನೀರು ತರುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಬಚ್ಚೇಗೌಡ ಹೇಳಿದ್ದಾರೆ.

ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿ ಒರ್ವ ಸುಳ್ಳುಗಾರ, ಎರಡು ಬಾರಿ ಗೆದ್ದು ಸಂಸದರಾದ ವೀರಪ್ಪ ಮೊಯ್ಲಿ ಈ ಭಾಗಕ್ಕೆ ನೀರು ಕೊಡುತ್ತೇನೆ ಎಂದು ಕಾಲ ಕಳೆದಿದ್ದಾನೆ. ಆದರೆ ನಮ್ಮ ಭಾಗಕ್ಕೆ ನೀರು ಕೊಡಲಿಲ್ಲ. 2 ದಿನಗಳ ಹಿಂದೆಯಷ್ಟೇ ಮಾತನಾಡಿ ಮತ್ತೆ ನೀರು ಕೊಡುತ್ತೇನೆ ಎಂದು ಸುಳ್ಳು ಹೇಳುತ್ತಿದ್ದಾರೆ. ವೀರಪ್ಪಮೊಯ್ಲಿ ಎತ್ತಿನಹೊಳೆ ನೀರು ಬಂತು ಬಂತು ಅಂತಿದ್ದು, ಅವನ ಕನಸಿನಲ್ಲಿ ಎತ್ತಿನಹೊಳೆ ಬಂದಿರಬೇಕು ಎಂದು ಏಕವಚನದಲ್ಲಿ ವಾಗ್ದಾಳಿ ನಡೆಸಿದರು.

ಕಳೆದ ಬಾರಿ ಚುನಾವಣೆ ವೇಳೆ ಎತ್ತಿನಹೊಳೆ ಯೋಜನೆಗೆ ಭಾರೀ ಪ್ರಮಾಣದಲ್ಲಿ ಪೂಜೆ ಮಾಡಿದ್ದು ಬಿಟ್ಟರೆ ಏನು ಅಭಿವೃದ್ಧಿ ಆಗಿಲ್ಲ. ಎತ್ತಿನಹೊಳೆ ಯೋಜನೆ 5 ವರ್ಷ ಆಗುತ್ತೋ 10 ವರ್ಷ ಆಗುತ್ತೋ ಗೊತ್ತಿಲ್ಲ. ಆದರೆ ಈ ಬಾರಿ ಮೋದಿ ಸರ್ಕಾರ ಬಂದೇ ಬರುತ್ತೆ, ನಾನು ನಿಮಗೆ ನೀರು ಕೊಡುತ್ತೇನೆ ಎಂದು ಆಶ್ವಾಸನೆ ನೀಡಿದರು.

ಹಾಲಿ ಸಂಸದರಾಗಿರುವ ವೀರಪ್ಪ ಮೊಯ್ಲಿ ಅವರು ನಿನ್ನೆ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ಆಂಧ್ರಪ್ರದೇಶದ ಸರ್ಕಾರ ಕೈಗೊಂಡಿರುವ ನೀರಾವರಿ ಯೋಜನೆ ಮೂಲಕ ಅನಂತಪುರಕ್ಕೆ ಬಂದಿರುವ ಕೃಷ್ಣ ನದಿ ನೀರನ್ನು ಬಯಲು ಸೀಮೆಯ ಜಿಲ್ಲೆಗಳಿಗೆ ಹರಿಸಲು ಕ್ರಮ ಕೈಗೊಳ್ಳುವ ಚಿಂತನೆ ಇದೆ ಎಂದಿದ್ದರು.

Comments

Leave a Reply

Your email address will not be published. Required fields are marked *