ಮಳೆಯಲ್ಲೇ ಕೂತು ಬಯಲಲ್ಲಿ ಪಾಠ ಕೇಳ್ಬೇಕು- ಗೋವಿಂದ ಕಾರಜೋಳ ಸ್ವಕ್ಷೇತ್ರದ ಕಥೆ

ಬಾಗಲಕೋಟೆ: ನೂತನ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯಗಳಲಿಲ್ಲದೆ ಸಂತ್ರಸ್ತರು ಪರದಾಡುತ್ತಿದ್ದು, ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಇತ್ತ ಮುಧೋಳ ತಾಲೂಕಿನ ಒಂಟಗೋಡಿಯಲ್ಲಿ ಮಕ್ಕಳು ಕಣ್ಣೀರು ಹಾಕುತ್ತಿದ್ದಾರೆ. ಘಟಪ್ರಭಾ ನದಿ ಪ್ರವಾಹದದಿಂದಾಗಿ ಸರ್ಕಾರಿ ಶಾಲೆ ಮುಳುಗಡೆಯಾಗಿದ್ದು, ಬಿದ್ದು ಹೋಗುವ ಸ್ಥಿತಿಯಲ್ಲಿದೆ. ಆದರೂ ಮಕ್ಕಳಿಗೆ ಪಾಠ ಮಾಡಲು ಬೇರೆ ಕಟ್ಟಡವಿಲ್ಲ. ಹೀಗಾಗಿ ಮಕ್ಕಳು ಬಯಲಲ್ಲೇ ಕುಳಿತು ಪಾಠ ಕೇಳುವ ಸ್ಥಿತಿ ನಿರ್ಮಾಣವಾಗಿದೆ.

ಶಾಲೆಯ ಕಟ್ಟಡ ಬೀಳುವ ಭಯದಿಂದ ಸಿಬ್ಬಂದಿ ಈಗಾಗಲೇ ಕಟ್ಟಡಕ್ಕೆ ಬೀಗ ಜಡಿದಿದ್ದಾರೆ. ಹೀಗಾಗಿ ಮಳೆ ಬಂದರೆ ಶಾಲೆಯ ಹೊರಗಡೆ ತಲೆ ಮೇಲೆ ಟಾರ್ಪಲ್ ಹಾಕಿಕೊಂಡು ಪಾಠ ಕೇಳುವ ಅನಿವಾರ್ಯ ಮಕ್ಕಳದ್ದಾಗಿದೆ.

ಶಾಲಾ ಕಟ್ಟಡ ನೀರಲ್ಲಿ ಮುಳುಗಿ ಹಾಳಾಗಿ ಹೋಗಿದ್ದರಿಂದ ಯಾವಾಗ ಬೀಳುತ್ತೋ ಅನ್ನೋ ಆತಂಕದಲ್ಲಿರುವ ಸ್ಥಳೀಯರು ಇಷ್ಟೆಲ್ಲ ಆದರೂ ಯಾವೊಬ್ಬ ನಾಯಕರು ಗ್ರಾಮಕ್ಕೆ ಭೇಟಿ ನೀಡಿ ಸಂತ್ರಸ್ತರ ಸ್ಥಿತಿ ಆಲಿಸಿಲ್ಲ ಎಂದು ಆರೋಪ ಮಾಡುತ್ತಿದ್ದಾರೆ. ಅಲ್ಲದೆ ಕೂಡಲೇ ಮಕ್ಕಳಿಗೆ ಶಾಲಾ ಕಟ್ಟಡದ ವ್ಯವಸ್ಥೆ ಮಾಡಿಸುವಂತೆ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ.

Comments

Leave a Reply

Your email address will not be published. Required fields are marked *