ಬೀದರ್: ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರ ಹಿರಿಯ ಸಹೋದರ ಹಾಗೂ ಭಾಲ್ಕಿ ಮಾಜಿ ಶಾಸಕ ವಿಜಯ್ಕುಮಾರ್ ಖಂಡ್ರೆ ಅವರು ಇಂದು ನಿಧನರಾಗಿದ್ದಾರೆ.
60 ವರ್ಷದ ವಿಜಯ್ಕುಮಾರ್ ಖಂಡ್ರೆ ಅವರು ಹೃದಯಾಘಾತಕ್ಕೆ ಒಳಗಾಗಿ ಹೈದರಾಬಾದ್ನ ಖಾಸಗಿ ಸನ್ ಶೈನ್ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ 10.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.
ಶೋಕ ಸಂದೇಶ
ಭಾಲ್ಕಿ ಮಾಜಿ ಶಾಸಕ ಡಾ.ವಿಜಯಕುಮಾರ ಖಂಡ್ರೆ ರವರು ಇಂದು ಬೆಳಗ್ಗೆ 10.30 ಗಂಟೆಗೆ ಹೈದ್ರಾಬಾದನ ಖಾಸಗಿ ಸನ್ ಶೈನ್ ಆಸ್ಪತ್ರೆ ಯಲ್ಲಿ ತೀವ್ರ ಹೃದಯಘಾತಕ್ಕೆ ಒಳಗಾಗಿ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ.
ಶ್ರೀಯುತರ ಅಂತ್ಯಕ್ರಿಯೆ ನಾಳೆ ಮಧ್ಯಾನ್ಹ 1.00ಗಂಟೆಗೆ ಸ್ವಗ್ರಾಮ ಭಾಲ್ಕಿಯಲ್ಲಿ ಜರುಗಲಿದೆ. pic.twitter.com/E0wdGt04jt— Sagar Khandre (@SagarKhandre12) April 29, 2019
ಎರಡು ಬಾರಿ ಭಾಲ್ಕಿ ಶಾಸಕರಾಗಿ ವಿಜಯಕುಮಾರ್ ಅವರು ಆಯ್ಕೆಯಾಗಿದ್ದರು. ಭಾಲ್ಕಿ ಕ್ಷೇತ್ರದಲ್ಲಿ ಇವರು ಬಹಳಷ್ಟು ಕೆಲಸಗಳನ್ನು ಮಾಡಿ ಹೆಸರುವಾಸಿಯಾಗಿದ್ದರು. ಇವರ ಅಂತ್ಯಸಂಸ್ಕಾರ ಮಂಗಳವಾರ ಮಧ್ಯಾಹ್ನ 1 ಗಂಟೆಗೆ ಸ್ವಗ್ರಾಮ ಭಾಲ್ಕಿಯಲ್ಲಿ ನೆರವೇರಲಿದ್ದು, ಈ ಬಗ್ಗೆ ಭಾಲ್ಕಿ ಕಾಂಗ್ರೆಸ್ ಹಾಗೂ ಈಶ್ವರ್ ಖಂಡ್ರೆ ಅವರು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.
ಟ್ವೀಟ್ನಲ್ಲಿ ಏನಿದೆ?
ಶೋಕ ಸಂದೇಶ, ಭಾಲ್ಕಿ ಮಾಜಿ ಶಾಸಕ ಡಾ.ವಿಜಯಕುಮಾರ ಖಂಡ್ರೆರವರು ಇಂದು ಬೆಳಗ್ಗೆ 10.30 ಗಂಟೆಗೆ ಹೈದ್ರಾಬಾದನ ಖಾಸಗಿ ಸನ್ ಶೈನ್ ಆಸ್ಪತ್ರೆ ಯಲ್ಲಿ ತೀವ್ರ ಹೃದಯಾಘಾತಕ್ಕೆ ಒಳಗಾಗಿ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ. ಶ್ರೀಯುತರ ಅಂತ್ಯಕ್ರಿಯೆ ನಾಳೆ ಮಧ್ಯಾಹ್ನ 1.00ಗಂಟೆಗೆ ಸ್ವಗ್ರಾಮ ಭಾಲ್ಕಿಯಲ್ಲಿ ಜರುಗಲಿದೆ ಎಂದು ಬರೆದು ಟ್ವೀಟ್ ಮಾಡಿ ಸಹೋದರ ನಿಧನರಾಗಿರುವ ವಿಷಯವನ್ನು ತಿಳಿಸಿ, ಸಂತಾಪ ಸೂಚಿಸಿದ್ದಾರೆ.

Leave a Reply