ಮಂಡ್ಯ: ಮಳೆ-ಗಾಳಿ ರಭಸಕ್ಕೆ ನೆಲಕಚ್ಚಿದ ಬಾಳೆ

ಮಂಡ್ಯ: ಇಷ್ಟು ದಿನ ಭೀಕರ ಬರಗಾಲದಿಂದ ತತ್ತರಿಸಿದ್ದ ಮಂಡ್ಯ ರೈತರು, ಇದೀಗ ಮಳೆಗಾಳಿಯ ರಭಸಕ್ಕೆ ಬೆಳೆ ನಾಶವಾಗಿ ಕಂಗಾಲಾಗಿದ್ದಾರೆ.

ಸೋಮವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಹಡೇನಹಳ್ಳಿ ಗ್ರಾಮದಲ್ಲಿ ಬಾಳೆ ತೋಟ ಬಹುತೇಕ ನಾಶವಾಗಿದೆ. ಗ್ರಾಮದ ಮಾಯಣ್ಣಗೌಡ ಎಂಬುವರಿಗೆ ಸೇರಿದ 8.5 ಎಕರೆ ತೋಟದಲ್ಲಿ ಬಾಳೆ ಬೆಳೆದಿದ್ದರು.

ಲಕ್ಷಾಂತರ ರೂಪಾಯಿ ಸಾಲ ಮಾಡಿ ಬೆಳೆದಿದ್ದ ಬಾಳೆ ನೆಲ ಕಚ್ಚಿರೋದ್ರಿಂದ ರೈತ ಮಾಯಣ್ಣಗೌಡರಿಗೆ ದಿಕ್ಕು ತೋಚದಂತಾಗಿದೆ. ಸರ್ಕಾರ ಸೂಕ್ತ ಬೆಳೆ ನಷ್ಟ ಪರಿಹಾರ ನೀಡಬೇಕೆಂದು ಮಾಯಣ್ಣಗೌಡ ಮನವಿ ಮಾಡಿಕೊಂಡಿದ್ದಾರೆ.

 

Comments

Leave a Reply

Your email address will not be published. Required fields are marked *