ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ : ನಾಳೆ ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟನೆ

13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಫೆ.3 ರಿಂದ ಏಳು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆಯಲಿದೆ.  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ಚಿತ್ರೋತ್ಸವವನ್ನು ಉದ್ಘಾಟಿಸಿ ಚಾಲನೆ ನೀಡಲಿದ್ದಾರೆ. ಬೆಂಗಳೂರಿನ ಜಿ.ಕೆ.ವಿ.ಕೆ ಸಭಾಂಗಣದಲ್ಲಿ ಸಂಜೆ 4.30ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವ ಎಂ.ರಾಜೀವ್ ಚಂದ್ರಶೇಖರ್ ಗೌರವಾನ್ವಿತ ಅತಿಥಿಗಳಾಗಿ ಆಗಮಿಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉನ್ನತ ಶಿಕ್ಷಣ ಸಚಿವ ಸಿ.ಎನ್. ಅಶ್ವತ್ಥ್ ನಾರಾಯಣ್, ಕಂದಾಯ ಸಚಿವ ಆರ್.ಅಶೋಕ್, ವಸತಿ ಸಚಿವ ವಿ.ಸೋಮಣ್ಣ, ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ್, ಸಹಕಾರಿ ಸಚಿವ ಎಸ್.ಟಿ. ಸೋಮಶೇಖರ್, ಆಹಾರ, ನಾಗರೀಕ ಸರಬರಾಜು ಸಚಿವ ಕೆ.ಗೋಪಾಲಯ್ಯ, ತೋಟಗಾರಿಕೆ ಸಚಿವ ಮುನಿರತ್ನ, ಪೌರಾಡಳಿತ ಮತ್ತು ಸಣ್ಣ ಕೈಗಾರಿಕಾ ಸಚಿವ ಎಂಟಿಬಿ ನಾಗರಾಜ್, ಶಾಸಕರಾದ ಎಸ್.ಆರ್. ವಿಶ್ವನಾಥ್, ಎಂ.ಕೃಷ್ಣಪ್ಪ, ಎಂ.ಸತೀಶ್ ರೆಡ್ಡಿ, ಬಿ.ಕೆ ಹರಿಪ್ರಸಾದ್ ಮುಖ್ಯ ಅತಿಥಿಗಳಾಗಿದ್ದಾರೆ. ಇದನ್ನೂ ಓದಿ : ಅದ್ಧೂರಿ ಸಮಾರಂಭದಲ್ಲಿ ಜನಾರ್ದನ ರೆಡ್ಡಿ ಪುತ್ರ ಕಿರೀಟಿ ಹೀರೋ ಆಗಿ ಲಾಂಚ್

ನಟ ದರ್ಶನ್ ಚಿತ್ರೋತ್ಸವದ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರೆ, ವಿಶೇಷ ಅತಿಥಿಯಾಗಿ ಹಿರಿ ನಟಿ ಭಾರತಿ ವಿಷ್ಣುವರ್ಧನ್ ಮತ್ತು ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಚಲನಚಿತ್ರ ನಿರ್ದೇಶಕ ಪ್ರಿಯದರ್ಶನ್ ಆಗಮಿಸುತ್ತಿದ್ದಾರೆ. ಇದನ್ನೂ ಓದಿ : ದುನಿಯಾ ವಿಜಯ್ ಹೊಸ ಚಿತ್ರಕ್ಕೆ ಟೈಟಲ್ ಫಿಕ್ಸ್

ಚಿತ್ರೋತ್ಸವದ ಕುರಿತು ಕರ್ನಾಟಕ ಚಲನಚಿತ್ರ ಅಕಾಡಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಪ್ರಾಸ್ತಾವಿಕ ನುಡಿಗಳನ್ನು ಆಡಿದರೆ, ನಟಿ ಪ್ರಣೀತಾ ಸುಭಾಷ್, ವಾಣಿಜ್ಯ ಮಂಡಳಿಯ ಅಧ್ಯಕ್ಷ ಡಿ.ಆರ್.ಜೈರಾಜ್ ಮತ್ತು ಮುಂತಾದವರು ವೇದಿಕೆಯ ಮೇಲೆ ಉಪಸ್ಥಿತರಿರಲಿದ್ದಾರೆ.

Comments

Leave a Reply

Your email address will not be published. Required fields are marked *