ಕಾನೂನು ಸುವ್ಯವಸ್ಥೆ ಕಾಪಾಡೋದ್ರಲ್ಲಿ ಸಿಎಂ ಬ್ಯುಸಿ: ಬಿ.ಸಿ.ಪಾಟೀಲ್

-ಮುಂದಿನ ವರ್ಷ ಸಚಿವ ಸಂಪುಟ ವಿಸ್ತರಣೆ

ಹಾವೇರಿ: ಕಾನೂನು ಸುವ್ಯವಸ್ಥೆ ಕಾಪಾಡುವುದರಲ್ಲಿ ಸಿಎಂ ಯಡಿಯೂರಪ್ಪ ಬ್ಯುಸಿಯಾಗಿದ್ದಾರೆ. ಹೀಗಾಗಿ ಈ ವರ್ಷ ಇಲ್ಲ, ಮುಂದಿನ ವರ್ಷ ಸಚಿವ ಸಂಪುಟ ವಿಸ್ತರಣೆ ಆಗುತ್ತೆ ಎಂದು ಹಿರೇಕೆರೂರು ಬಿಜೆಪಿ ಶಾಸಕ ಬಿ.ಸಿ.ಪಾಟೀಲ ಹೇಳಿದರು.

ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿಎಂ ನವದೆಹಲಿಗೆ ಹೋಗುವುದು ವಿಳಂಬ ಆಗಿದೆ. ಅವರು ದೆಹಲಿಗೆ ಹೋಗಿ ಬಂದ ನಂತರ ಸಚಿವ ಸಂಪುಟ ವಿಸ್ತರಣೆ ಆಗುತ್ತದೆ. ಹೀಗಾಗಿ ಮುಂದಿನ ವರ್ಷ ಸಚಿವ ಸಂಪುಟ ವಿಸ್ತರಣೆ ಆಗುತ್ತೆ. ಈಗ ಸಿಎಂ ಯಡಿಯೂರಪ್ಪ ಕಾನೂನು ಸುವ್ಯವಸ್ಥೆ ಕಾಪಾಡುವುದರಲ್ಲಿ ಬ್ಯುಸಿಯಾಗಿದ್ದಾರೆ ಎಂದರು.

ಮಂಗಳೂರು ಘಟನೆ ವಿಚಾರದಲ್ಲಿ ಸಿಸಿಟಿವಿ ದೃಶ್ಯಾವಳಿಗಳ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ಖಂಡಿಸಿದ ಪಾಟೀಲ್, ಸಿದ್ದರಾಮಯ್ಯ ಸಿಎಂ ಆಗಿದ್ದವರು. ದುಷ್ಕರ್ಮಿಗಳು ಕಾನೂನು ಸುವ್ಯವಸ್ಥೆ ಹಾಳು ಮಾಡುವಾಗ ಪೊಲೀಸರು ತಮ್ಮ ಕೆಲಸ ಮಾಡಿದ್ದಾರೆ. ಹೀಗಾಗಿ ಪೊಲೀಸರ ಬಗ್ಗೆ ಹೇಳಿಕೆ ನೀಡುವುದು ಸರಿಯಲ್ಲ. ಅಲ್ಲದೇ ಮಂಗಳೂರು ಘಟನೆ ವಿಚಾರಕ್ಕೆ ಗೃಹ ಸಚಿವರು ರಾಜೀನಾಮೆ ಕೊಡುವ ಪ್ರಶ್ನೆ ಬರುವುದಿರಿಲ್ಲ ಎಂದು ಶಾಸಕ ಬಿ.ಸಿ.ಪಾಟೀಲ ಹೇಳಿದರು.

Comments

Leave a Reply

Your email address will not be published. Required fields are marked *