ಡಿವಿಎಸ್, ಕರಂದ್ಲಾಜೆಯಿಂದ ಕೋಮು ಗಲಭೆ: ರಮಾನಾಥ ರೈ

ಮಂಗಳೂರು: ಕರಾವಳಿ ಭಾಗದಲ್ಲಿ ಕೋಮುಗಲಭೆ ಸೃಷ್ಟಿಯಾಗುವುದಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಕೇಂದ್ರ ಸಚಿವ ಸದಾನಂದಗೌಡ ಕಾರಣ ಅಂತ ಅರಣ್ಯ ಸಚಿವ ರಮಾನಾಥ ರೈ ಆರೋಪಿಸಿದ್ದಾರೆ.

ಕರಾವಳಿಯಲ್ಲಿ ಕೋಮು ಗಲಭೆ ವಿಚಾರವಾಗಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕರಾವಳಿ ಭಾಗದಲ್ಲಿ ಕೋಮುಗಲಭೆ ಸೃಷ್ಟಿಯಾಗೋದಕ್ಕೆ ಶೋಭಾ ಕರಂದ್ಲಾಜೆ, ಸದಾನಂದಗೌಡ ಕಾರಣ. ಶೋಭಾ ಕರಂದ್ಲಾಜೆ ಚಿಕ್ಕಮಗಳೂರು ಹಾಗೂ ಉಡುಪಿ ಸಂಸದರು. ಸದಾನಂದಗೌಡರು ಬೆಂಗಳೂರು ಸಂಸದರು. ಅವರು ಅಲ್ಲಿಗೆ ಯಾಕೆ ಹೋಗಬೇಕು ಎಂದು ಪ್ರಶ್ನಿಸಿದರು.

ಸೂತಕದ ಮನೆಯಲ್ಲಿ ವಿಜಯೋತ್ಸವ ಮಾಡೋದು ಎಷ್ಟು ಸರಿ? ಕರಾವಳಿ ಭಾಗದಲ್ಲಿ ಕೋಮುಗಲಭೆ ನಿವಾರಣೆಗೆ ಶಾಂತಿ ಸಭೆ ಕರೆದಿದ್ದೇವೆ. ಇನ್ನೊಂದು ವಾರದಲ್ಲಿ ಶಾಂತಿ ಸಭೆ ನಡೆಸಲಾಗುವುದು. ಶಾಂತಿ ಸಭೆಗೆ ಬಿಜೆಪಿ, ಆರ್‍ಎಸ್‍ಎಸ್ ಮುಖಂಡರನ್ನೂ ಆಹ್ವಾನಿಸಿದ್ದೇವೆ. ಮಂಗಳೂರಿನಲ್ಲಿ ಶಾಂತಿ ಸಭೆ ಕರೆದಿದ್ದೇವೆ. ಎಲ್ಲರ ಜೊತೆಗೂ ಚರ್ಚೆ ನಡೆಸಿ ಸೌಹಾರ್ದ ವಾತಾವರಣ ರೂಪಿಸಲು ಮನವಿ ಮಾಡಿಕೊಳ್ತೇವೆ ಅಂದರು.

ಇದನ್ನೂ ಓದಿ: ಕೇಂದ್ರಕ್ಕೆ ಅವಕಾಶ ಕೊಟ್ರೇ ಬರೀ 24 ಗಂಟೆಯಲ್ಲಿ ಕರಾವಳಿ ಶಾಂತವಾಗಿರಿಸ್ತೀವಿ- ಸಿಎಂಗೆ ಡಿವಿಎಸ್ ಬಹಿರಂಗ ಸವಾಲು

Comments

Leave a Reply

Your email address will not be published. Required fields are marked *