ಕರುನಾಡಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ – 81ನೇ ದಿನಕ್ಕೆ ಕಾಲಿಟ್ಟ ಧರಣಿ ಸತ್ಯಾಗ್ರಹ

ಬೆಂಗಳೂರು: ಕನ್ನಡಿಗರಿಗೆ ಕರ್ನಾಟಕದ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡಿ ಎಂದು ಕನ್ನಡ ಪರ ಸಂಘಟನೆಗಳು ಮಾಡುತ್ತಿರೋ ಧರಣಿ ಸತ್ಯಾಗ್ರಹ 81ನೇ ದಿನಕ್ಕೆ ಕಾಲಿಟ್ಟಿದೆ.

ಕಳೆದ ನವಂಬರ್ ಒಂದರಿಂದ ಕನ್ನಡ ಸಂಘಟನೆಗಳ ಒಕ್ಕೂಟ ವತಿಯಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಬೆಂಗಳೂರಿನ ಮೌರ್ಯ ಸರ್ಕಲ್ ನಲ್ಲಿ ಪ್ರಾರಂಭವಾಗಿದೆ. 80 ದಿನ ಧರಣಿ ಮಾಡಿದರು ಸರ್ಕಾರದಿಂದ ಡಾ. ಸರೋಜಿನಿ ಮಹಿಷಿ ವರದಿಯನ್ನು ಅನುಷ್ಠಾನಗೊಳಿಸುವ ಯಾವುದೇ ಭರವಸೆಗಳು ಸಿಕಿಲ್ಲ.

ಡಾ. ಸರೋಜಿನಿ ಮಹಿಷಿ ವರದಿಯನ್ನು ಜಾರಿಗೆ ತಂದರೆ ಕನ್ನಡಿಗರಿಗೆ ಉದ್ಯೋಗಾವಕಾಶಗಳು ಹೆಚ್ಚಾಗುತ್ತದೆ. ಆ ಹಿನ್ನೆಲೆಯಲ್ಲಿ ಕನ್ನಡ ಪರ ಸಂಘಟನೆಗಳು ಕನ್ನಡ ರಾಜ್ಯೋತ್ಸವದ ದಿನದಿಂದ ಹೋರಾಟವನ್ನು ಮಾಡಿಕೊಂಡು ಬಂದಿದ್ದಾರೆ. ವರದಿ ಜಾರಿಗೆ ತರಲೇಬೇಕು ಇಲ್ಲವಾದಲ್ಲಿ ಫೆಬ್ರವರಿ 13 ಕ್ಕೆ ಕರ್ನಾಟಕ ಬಂದ್ ಕರೆ ನೀಡಲಾಗುತ್ತದೆ ಎಂದು ಸಂಘಟನೆಗಳು ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಿವೆ. ಇಂದು 81 ನೇ ದಿನದ ಧರಣಿ ಸತ್ಯಾಗ್ರಹ ಮುಂದುವರಿದಿದೆ.

Comments

Leave a Reply

Your email address will not be published. Required fields are marked *