ಚಿಕ್ಕೋಡಿ: ಮೃತ ಮಹಿಳೆಯ ಗೋರಿ ಮೇಲೆ ಕಾಗೆಗೆ ಇಟ್ಟಿದ್ದ ಪಿಂಡವನ್ನು ಕಾಗೆ ತಿನ್ನಲಿಲ್ಲ ಎಂದು ಕೆಲ ಯುವಕರೇ ತಿಂದಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಜಲಾಲಪೂರ ಗ್ರಾಮದಲ್ಲಿ ನಡೆದಿದೆ.
ಜಲಾಲಪೂರ ಗ್ರಾಮದ ಸೇವಂತಿ ಕರುಣೆ ಮೂರು ದಿನದ ಹಿಂದೆ ಸಾವನ್ನಪ್ಪಿದ್ದರು. ಹೀಗಾಗಿ ಕಾಗೆಗೆ ಪಿಂಡ ಇಡುವ ಕಾರ್ಯಕ್ರಮ ಇಂದು ಇಡಲಾಗಿತ್ತು. ಆದರೆ ಯುವಕರು ಕಾಗೆ ಪಿಂಡವನ್ನು ತಾವೇ ತಿಂದು ಮೂಢನಂಬಿಕೆ ವಿರುದ್ಧ ಜಾಗೃತಿಗೆ ಮುಂದಾಗಿದ್ದಾರೆ.

ಕಾಗೆಗೋಸ್ಕರ ಸತತ ಒಂದು ಗಂಟೆ ಕಾದರೂ ಕಾಗೆಗಳು ಬರಲಿಲ್ಲ. ಈ ವೇಳೆ ದಲಿತ ಸಂಘರ್ಷ ಸಮಿತಿಯ ಭೀಮವಾದ ಕಾರ್ಯಕರ್ತರು ಅಲ್ಲಿಯೇ ಇದ್ದರು. ಕಾಗೆಗಳು ಬರದೆ ಇರುವುದುನ್ನು ಗಮನಿಸಿ ಯುವಕರು ಪಿಂಡ ಪ್ರಧಾನಕ್ಕೆ ಇಟ್ಟಿದ್ದ ಆಹಾರವನ್ನು ಸೇವಿಸಿದ್ದಾರೆ. ಈ ಮೂಲಕ ಯುವ ಸೇನೆಯು ಮೂಢನಂಬಿಕೆ ವಿರುದ್ಧ ಹೊಸ ಕ್ರಾಂತಿಯನ್ನು ಮಾಡಿದೆ. ಯುವಕರು ಗೋರಿಯ ಮೇಲಿದ್ದ ಆಹಾರ ಸೇವಿಸಿದ್ದು ಜನರಲ್ಲಿ ಆಶ್ಚರ್ಯ ಮೂಡಿಸಿದೆ.

Leave a Reply