ಸಿದ್ದು ಕಣ್ಣುಗಳು ಹಳದಿಯಾಗಿವೆ, ದೆವ್ರು ಅವ್ರಿಗೆ ಒಳ್ಳೆಯ ಬುದ್ಧಿ ಕೊಡಲಿ: ರಮೇಶ್

ಬೆಳಗಾವಿ: ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ದೇವರು ಒಳ್ಳೆಯ ಬುದ್ಧಿ ನೀಡಲಿ. ಯಾರು ದರಿದ್ರರು ಎನ್ನುವುದನ್ನು ಜನ ತೀರ್ಮಾನ ಮಾಡುತ್ತಾರೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಸಿದ್ದರಾಮಯ್ಯನವರ ವಿರುದ್ಧ ಅಸಮಾಧಾನ ವ್ಯಕ್ತ ಪಡಿಸಿದರು.

ಎಂ.ಕೆ ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಕಣ್ಣುಗಳು ಹಳದಿಯಾಗಿವೆ. ದೇವರು ಅವರಿಗೆ ಒಳ್ಳೆಯ ಬುದ್ಧಿ ಕೊಡಲಿ ಎಂದು ಜರಿದರು.

ರಾಜ್ಯದ ಸಿಎಂ ಬಿ.ಎಸ್.ಯಡಿಯೂರಪ್ಪ ಉತ್ತಮವಾದ ಬಜೆಟ್ ಮಂಡಿಸಿದ್ದಾರೆ. ವಿಶೇಷವಾಗಿ ನೀರಾವರಿ ಇಲಾಖೆಗೆ ಸಾಕಷ್ಟು ಅನುದಾನ ನೀಡಿದ್ದಾರೆ. ನೀರಾವರಿ ಸೇರಿದಂತೆ ಸಮಾಜ ಕಲ್ಯಾಣದ ಜತೆ ಎಲ್ಲ ಇಲಾಖೆಗೂ ಸಮಾನ ರೀತಿಯಲ್ಲಿ ಅನುದಾನ ಹಂಚಿಕೆ ಮಾಡಿದ್ದಾರೆ. ಅದಕ್ಕೆ ನಾನು ಸಿಎಂ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಸಚಿವ ಸಂಪುಟ ಸಭೆಯಲ್ಲಿ ಕೃಷ್ಣಾ ಮೇಲ್ದಂಡೆಯ ವಿಚಾರ ಕುರಿತು ಮಾತನಾಡಿದ್ದೇನೆ. ಅದರಲ್ಲಿ ವಿರೋಧ ಪಕ್ಷದವರು ರಾಜಕೀಯ ಬೆರೆಸಿದ್ದಾರೆ ಎಂದು ಕಿಡಿಕಾರಿದರು.

Comments

Leave a Reply

Your email address will not be published. Required fields are marked *