ಹೆಡ್ ಮಾಸ್ಟರ್ ಕಿರುಕುಳ ಆರೋಪ- ಡೆತ್‍ನೋಟ್ ಬರೆದು ರೈಲಿಗೆ ತಲೆಕೊಟ್ಟ ಶಿಕ್ಷಕಿ

ಚಿಕ್ಕೋಡಿ: ಹೆಡ್ ಮಾಸ್ಟರ್ ಕಿರುಕುಳದಿಂದ ಬೇಸತ್ತು ರೈಲಿಗೆ ತಲೆ ಒಡ್ಡಿ ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ರಾಯಬಾಗ (Raibag) ರೈಲು ನಿಲ್ದಾಣ ಸಮೀಪ ನಡೆದಿದೆ.

ಖಾಸಗಿ ಅನುದಾನಿತ ಶಾಲೆಯಲ್ಲಿ ಶಿಕ್ಷಕಿಯಾಗಿ (Teacher) ಕಾರ್ಯನಿರ್ವಹಿಸುತ್ತಿದ್ದ ಕುಡಚಿ ನಿವಾಸಿ ಅನ್ನಪೂರ್ಣ ರಾಜು ಬಸಾಪೂರೆ (55) ಆತ್ಮಹತ್ಯೆ ಮಾಡಿಕೊಂಡ ಮಹಿಳಾ ಶಿಕ್ಷಕಿ. ಇದನ್ನೂ ಓದಿ: ನನ್ನ ಸ್ಥಿತಿ ಯಾರಿಗೂ ಬೇಡ- ಅಪ್ಪನ ನೆನಪಿಗಾಗಿ ಕ್ಯಾಂಟೀನ್ ಮಂಜಣ್ಣನಿಂದ ಉಚಿತ ಅಂಬುಲೆನ್ಸ್ ಸೇವೆ

ಅನ್ನಪೂರ್ಣ ಖಾಸಗಿ ಶಿಕ್ಷಣ ಸಂಸ್ಥೆಯ ಹೆಡ್ ಮಾಸ್ಟರ್ ಕಿರುಕುಳದಿಂದ ಆತ್ಮಹತ್ಯೆ (Sucide) ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಡೆತ್ ನೋಟ್ ನಲ್ಲಿ ಹೆಡ್ ಮಾಸ್ಟರ್ ಹೆಸರು ಬರೆದಿಟ್ಟಿದ್ದಾರೆ. ನನ್ನ ಸಾವಿಗೆ ಶಾಲೆ ಮುಖ್ಯ ಶಿಕ್ಷಕ ಕಾರಣ ಎಂದು ಉಲ್ಲೇಖಿಸಿರುವ ಪತ್ರ ಪತ್ತೆಯಾಗಿದೆ.

ಸ್ಥಳಕ್ಕೆ ರೈಲ್ವೆ ಪೊಲೀಸರು (Railway Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ

Comments

Leave a Reply

Your email address will not be published. Required fields are marked *