ನೀರಿನ ಹೊಂಡದಲ್ಲಿ ಮುಳುಗಿ ನಾಲ್ಕು ಮಕ್ಕಳು ಸಾವು

ಬೆಳಗಾವಿ: ಜಮೀನಿನಲ್ಲಿ ಆಟವಾಡುತ್ತಿದ್ದ ನಾಲ್ಕು ಮಕ್ಕಳು ಹೊಂಡದಲ್ಲಿ ಮುಳುಗಿ ಮೃತಪಟ್ಟ ಘಟನೆ ಗೋಕಾಕ್ ತಾಲೂಕಿನ ಅಂಜನಕಟ್ಟಿ ಗ್ರಾಮದಲ್ಲಿ ನಡೆದಿದೆ.

ಭಾಗವಾ, ಸುಪ್ರೀತಾ, ಮಲ್ಲಪ್ಪ ಹಾಗೂ ರಾಧಿಕಾ ಮೃತಪಟ್ಟ ಮಕ್ಕಳು. ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಇಡೀ ಭಾರತ ಲಾಕ್ ಡೌನ್ ಮಾಡಲಾಗಿದೆ. ಆದರೂ ಪೋಷಕರು ತಮ್ಮ ಉಪ ಜೀವನಕ್ಕಾಗಿ ಮಕ್ಕಳನ್ನು ಕರೆದುಕೊಂಡು ಜಮೀನಿಗೆ ಹೋಗಿದ್ದಾರೆ. ಈ ವೇಳೆ ಈ ಘಟನೆ ಸಂಭವಿಸಿದೆ.

ಮಕ್ಕಳ ಜೊತೆ ಜಮೀನಿಗೆ ಹೋದ ಪೋಷಕರು ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಈ ವೇಳೆ ಮಕ್ಕಳು ಜಮೀನಿನಲ್ಲಿ ಆಟವಾಡುತ್ತಿದ್ದರು. ಆಟವಾಡುತ್ತಿದ್ದ ಮಕ್ಕಳು ತಮಗೆ ತಿಳಿಯದೆ ನೀರಿನ ಹೊಂಡದಲ್ಲಿ ಬಿದ್ದು, ನಾಲ್ಕು ಮಕ್ಕಳು ಮೃತಪಟ್ಟಿದ್ದಾರೆ. ಗೋಕಾಕ್ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Comments

Leave a Reply

Your email address will not be published. Required fields are marked *