ಖಾನಪೂರದಲ್ಲಿ ಗೋಡೆ ಬಿದ್ದು ಬಾಲಕನ ಸಾವು – 5 ಲಕ್ಷ ರೂಪಾಯಿ ಪರಿಹಾರ ವಿತರಿಸಿದ ಡಿಸಿ

ಬೆಳಗಾವಿ: ಖಾನಾಪುರ ತಾಲೂಕಿನ ಬೀಡಿ ಹೋಬಳಿಯ ಚುಂಚವಾಡ ಗ್ರಾಮದಲ್ಲಿ ಮಳೆಯಿಂದ ಗೋಡೆ ಬಿದ್ದು ಮೃತಪಟ್ಟಿರುವ ಬಾಲಕನಿಗೆ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಐದು ಲಕ್ಷ ಪರಿಹಾರ ನೀಡಿದ್ದಾರೆ.

ಖಾನಾಪುರ ತಾಲೂಕಿನ ಚುಂಚವಾಡ ಗ್ರಾಮದ ಅನಂತರಾಜ ಧರಣೇಂದ್ರ ಪಾಶೆಟ್ಟಿ(15) ಮನೆಯ ಗೋಡೆ ಕುಸಿದು ಸಾವನ್ನಪ್ಪಿದ್ದನು. ಬಾಲಕ ಸಾವನ್ನಪ್ಪಿದ ಕೆಲವೇ ಗಂಟೆಗಳಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಆರ್.ಟಿ.ಜಿ.ಎಸ್ ಮೂಲಕ ಕುಟುಂಬಸ್ಥರಿಗೆ ಐದು ಲಕ್ಷ ರೂಪಾಯಿ ಪರಿಹಾರವನ್ನು ನೀಡಿದ್ದಾರೆ. ಇದನ್ನೂ ಓದಿ: ಗೋಡೆ ಕುಸಿತ – 15 ವರ್ಷದ ಬಾಲಕ ಸ್ಥಳದಲ್ಲೆ ಸಾವು

ಪ್ರಕೃತಿ ವಿಕೋಪದಿಂದ ಈ ಘಟನೆ ಸಂಭವಿಸಿರುವ ಹಿನ್ನೆಲೆ ನಿಯಮಾವಳಿ ಪ್ರಕಾರ ಮೃತ ಬಾಲಕನ ತಂದೆ ಧರಣೇಂದ್ರ ಪಾಶೆಟ್ಟಿ ಅವರ ಬ್ಯಾಂಕ್ ಖಾತೆಗೆ ಪರಿಹಾರ ಧನವನ್ನು ಖಾನಾಪುರ ತಹಶೀಲ್ದಾರರ ಪಿ.ಡಿ. ಖಾತೆಯಿಂದ ಜಮಾ ಮಾಡಲಾಗಿದೆ. ದುರಂತದ ಕುರಿತು ವರದಿಯನ್ನು ಪಡೆದುಕೊಂಡ ಕೆಲವೇ ಗಂಟೆಗಳಲ್ಲಿ ಮೃತರ ವಾರಸುದಾರರಿಗೆ ಪರಿಹಾರಧನವನ್ನು ನೀಡುವ ಮೂಲಕ ಜಿಲ್ಲಾಡಳಿತ ಅತ್ಯಂತ ತ್ವರಿತವಾಗಿ ಸ್ಪಂದಿಸಿದೆ.

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *