ಬಿಎಸ್‍ವೈ ಭೇಟಿಯಾಗಿ ಶುಭ ಕೋರಿದ ಜೆಡಿಎಸ್ ಶಾಸಕ ಲಿಂಗೇಶ್

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಹಾಸನ ಜಿಲ್ಲೆ ಬೇಲೂರು ಕ್ಷೇತ್ರದ ಜೆಡಿಎಸ್ ಶಾಸಕ ಕೆ.ಎಸ್.ಲಿಂಗೇಶ್ ಭೇಟಿಯಾಗಿ ಶುಭ ಕೋರಿದ್ದಾರೆ.

ಪ್ರತಿಷ್ಠಿತ ಪುಷ್ಪಗಿರಿ ಸೋಮಶೇಖರ ಸ್ವಾಮೀಜಿ ನೇತೃತ್ವದಲ್ಲಿ ಶಾಸಕರು ಸಿಎಂ ನಿವಾಸಕ್ಕೆ ಆಗಮಿಸಿ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ. ಈ ಭೇಟಿಯು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಯಾಗುತ್ತಿದ್ದು, ಕೆ.ಎಸ್.ಲಿಂಗೇಶ್ ಅವರು ಬಿಜೆಪಿ ಸೇರುತ್ತಾರಾ ಎಂಬ ಪ್ರಶ್ನೆ ಎದ್ದಿದೆ.

ಈ ಹಿಂದೆ ಆಪರೇಷನ್ ಕಮಲದಲ್ಲಿ ಶಾಸಕ ಲಿಂಗೇಶ್ ಸಿಲುಕಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಇದೀಗ ಸೋಮಶೇಖರ ಸ್ವಾಮೀಜಿ ಜೊತೆಗೆ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿರುವುದು ಇದಕ್ಕೆ ಮತ್ತಷ್ಟು ಪುಷ್ಠಿ ನೀಡಿದೆ.

ಬಿ.ಎಸ್.ಯಡಿಯೂರಪ್ಪ ಅವರು ಆಪರೇಷನ್ ಕಮಲ ಮುಂದುವರಿಸಿದರಾ? ಶಾಸಕ ಲಿಂಗೇಶ್ ಅವರು ಇದಕ್ಕೆ ಒಳಗಾಗಿದ್ದಾರಾ ಎಂಬ ಪ್ರಶ್ನೆಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿವೆ.

Comments

Leave a Reply

Your email address will not be published. Required fields are marked *