ಒಡೆಯನಾಗಿ ಬಂದು ಹಬ್ಬಕ್ಕೆ ಶುಭಕೋರಿದ ದಚ್ಚು

ಬೆಂಗಳೂರು: ದೇಶದ್ಯಾಂತ ಆಚರಿಸುವ ಗೌರಿ ಗಣೇಶ ಹಬ್ಬಕ್ಕೆ ಒಡೆಯ ಪೋಸ್ಟರ್ ಹಾಕುವ ಮೂಲಕ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನಾಡಿನ ಸಮಸ್ತ ಜನತೆಗೆ ಶುಭಕೋರಿದ್ದಾರೆ.

ಈ ವಿಚಾರವಾಗಿ ಇಂದು ಟ್ವೀಟ್ ಮಾಡಿರುವ ದರ್ಶನ್ ಅವರು ಎಲ್ಲರಿಗೂ ಗೌರಿ ಗಣೇಶ ಹಬ್ಬದ ಹಾರ್ಧಿಕ ಶುಭಾಶಯಗಳು, ನಿಮ್ಮ ಎಲ್ಲ ಕನಸುಗಳು ಈಡೇರಲಿ, ಆ ದೇವರ ಆಶೀರ್ವಾದ ಸದಾ ನಿಮ್ಮ ಕುಟುಂಬದ ಮೇಲಿರಲಿ ಎಂದು ಬರೆದು ಟ್ವೀಟ್ ಮಾಡಿದ್ದಾರೆ.

ಈ ಟ್ವೀಟ್‍ನಲ್ಲಿ ಸಂದೇಶ್ ಪ್ರೊಡಕ್ಷನ್‍ನಲ್ಲಿ ಎಂ.ಡಿ ಶ್ರೀಧರ್ ಅವರು ನಿರ್ದೇಶನ ಮಾಡುತ್ತಿರುವ ಒಡೆಯ ಸಿನಿಮಾದ ಪೋಸ್ಟರ್ ಹಾಕಿದ್ದಾರೆ. ಈ ಚಿತ್ರಕ್ಕೆ ಅರ್ಜನ್ ಜನ್ಯ ಸಂಗೀತ ನೀಡಿದ್ದಾರೆ.

ಗೋಲ್ಡನ್ ಸ್ಟಾರ್ ಗಣೇಶ್ ಕೂಡ ಹಬ್ಬಕ್ಕೆ ಶುಭಕೋರಿದ್ದು, ಅವರ ಅಭಿನಯದ ಗೀತಾ ಚಿತ್ರದ ಪೋಸ್ಟರ್ ಹಾಕಿ ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಶುಭಾಶಯಗಳು ಎಂದು ಬರೆದು ಟ್ವೀಟ್ ಮಾಡಿದ್ದಾರೆ.

Comments

Leave a Reply

Your email address will not be published. Required fields are marked *