ಡಿಕೆಶಿ ಸ್ಟೈಲಿಶ್ ಗಡ್ಡಕ್ಕೆ ಅಭಿಮಾನಿಗಳು ಫಿದಾ

ಬೆಂಗಳೂರು: ಅಕ್ರಮ ಹಣ ವರ್ಗಾವಣೆಯ ಆರೋಪದಿಂದ ಜೈಲು ಸೇರಿದ್ದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರು ಬುಧವಾರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಈ ನಡುವೆ ಡಿಕೆಶಿಯ ಸ್ಟೈಲಿಶ್ ಗಡ್ಡಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ಒಂದು ತಿಂಗಳಿಗೂ ಅಧಿಕ ಕಾಲ ಜಾರಿ ನಿರ್ದೇಶನಾಲಯ (ಇಡಿ) ಬಂಧನದ ಬಳಿಕ ತಿಹಾರ್ ಜೈಲುವಾಸದಲ್ಲಿದ್ದ ಡಿಕೆ ಜೈಲಿನಿಂದ ಹೊರ ಬಂದಿದ್ದು, ಅವರ ಮುಖಚಹರೆಯಲ್ಲಿ ಬದಲಾವಣೆ ಕಂಡು ಬಂದಿದೆ. ಜೈಲುವಾಸದ ನಂತರ ಡಿ.ಕೆ ಶಿವಕುಮಾರ್ ಅವರು ಗಡ್ಡ ಬಿಟ್ಟಿದ್ದು, ಈ ಟೈಗರ್ ಲುಕ್‍ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ಡಿ.ಕೆ ಶಿವಕುಮಾರ್ ಅವರು ಇದೇ ಮೊದಲ ಬಾರಿಗೆ ಈ ರೀತಿಯಲ್ಲಿ ಗಡ್ಡ ಬಿಟ್ಟಿದ್ದಾರೆ. ಸದಾ ಶೇವ್ ಮಾಡಿಕೊಂಡು ಇರುತ್ತಿದ್ದ ಡಿಕೆಶಿ ಅವರನ್ನು ಈ ಹೊಸ ಲುಕ್‍ನಲ್ಲಿ ನೋಡಿದ ಅವರ ಅಭಿಮಾನಿಗಳು ಅಣ್ಣ ನಿಮಗೆ ಗಡ್ಡ ಚೆನ್ನಾಗಿ ಕಾಣುತ್ತದೆ, ಗಡ್ಡ ತೆಗೆಯಬೇಡಿ ಎಂದು ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಈ ಮಧ್ಯೆ ಡಿ.ಕೆ ಶಿವಕುಮಾರ್ ಅವರು ದೈವಭಕ್ತರಾಗಿದ್ದು, ತಮ್ಮ ಮನೆ ದೇವರು ಕಬ್ಬಾಳಮ್ಮನ ದರ್ಶನದ ನಂತರ ಗಡ್ಡ ತೆಗೆಯಲು ಹಾಗೇ ಬಿಟ್ಟಿದ್ದಾರೆ ಎಂದು ಹೇಳಲಾಗಿದೆ. ಇನ್ನೂ ಕೆಲ ಅವರ ಅಭಿಮಾನಿಗಳು ನೊಣವಿನಕೆರೆ ಅಜ್ಜಯ್ಯ ಅವರ ಮಹಾನ್ ಭಕ್ತರಾಗಿರುವ ಡಿಕೆ ಶಿವಕುಮಾರ್ ಅವರು ಅಜ್ಜಯ್ಯನವರ ದರ್ಶನ ಮಾಡಿ ನಂತರ ಗಡ್ಡ ತೆಗೆಯಬೇಕು ಎಂದು ಹರಕೆ ಮಾಡಿಕೊಂಡಿರಬಹುದು ಎಂದು ಮಾತನಾಡಿಕೊಳ್ಳುತ್ತಿದ್ದಾರೆ.

ಇದರ ಜೊತೆಗೆ ಡಿ.ಕೆ ಶಿವಕುಮಾರ್ ಪ್ರತೀಕಾರ ತೀರಿಸಿಕೊಳ್ಳಲು ಗಡ್ಡ ಬಿಟ್ಟಿದ್ದಾರೆ. ಸಿಂಪಥಿ ಗಿಟ್ಟಿಸಿಕೊಳ್ಳೋಕೆ ಈ ರೀತಿಯ ಪ್ಲಾನ್ ಮಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ಸುದ್ದಿಯಾಗುತ್ತಿದೆ. ಇನ್ನೂ ಕೆಲ ಅಭಿಮಾನಿಗಳು ಜೈಲಿಂದ ಹೊರ ಬಂದ ಬಳಿಕ ಡಿಕೆ ಶಿವಕುಮಾರ್ 2.0 ಆಗಿ ಬದಲಾಗಿದ್ದಾರೆ ಎಂದು ಟ್ರೋಲ್ ಮಾಡುತ್ತಿದ್ದಾರೆ.

Comments

Leave a Reply

Your email address will not be published. Required fields are marked *