ಸಿದ್ದರಾಮಯ್ಯ ರಾಜೀನಾಮೆ ಕೊಡಲಿ: ಆರ್ ಅಶೋಕ್ ಆಗ್ರಹ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಕಂದಾಯ ಸಚಿವ ಆರ್ ಅಶೋಕ್ ಆಗ್ರಹಿಸಿದ್ದಾರೆ.

ಇಂದು ರಾಜ್ಯ ಉಪಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದು, ಬಿಜೆಪಿಗೆ 12 ಸೀಟುಗಳು ಲಭಿಸಿವೆ. ಕಾಂಗ್ರೆಸ್ಸಿಗೆ 2 ಸೀಟು ಅಂತ ಹೇಳಲಾಗುತ್ತಿದ್ದು, ಅದೂ ಸಿಗೋದು ಡೌಟು. ಇದೇ ವೇಳೆ ಜೆಡಿಎಸ್ ಕರ್ನಾಟಕ ಭೂಪಟದಲ್ಲಿ ಕಾಣೆಯಾಗುತ್ತಿದೆ ಎಂದು ಹೇಳಿದರು.

ಸಿದ್ದರಾಮಯ್ಯ ಅವರಿಗೆ ನೈತಿಕತೆ ಇಲ್ಲ. ಹೀಗಾಗಿ ಅವರು ಕೂಡಲೇ ರಾಜೀನಾಮೆ ಕೊಡಬೇಕು. ಮುಂದಿನ ದಿನಗಳಲ್ಲಿ ಮಾಜಿ ಸಿಎಂ ಅವರನ್ನು ಕೆಳಗಿಳಿಸುವ ದೊಡ್ಡ ಪರ್ವವೇ ಆರಂಭವಾಗುತ್ತದೆ ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

Comments

Leave a Reply

Your email address will not be published. Required fields are marked *