ನೆಲಕ್ಕುರುಳಿದ ಬೃಹತ್ ಮರ – ಆರು ಕಾರುಗಳು ಜಖಂ

ಬೆಂಗಳೂರು: ಚಾಮರಾಜಪೇಟೆಯ ನಾಲ್ಕನೇ ಮುಖ್ಯರಸ್ತೆಯಲ್ಲಿ ಬೃಹತ್ ಆಲದ ಮರವೊಂದು ನೆಲಕ್ಕುರಿಳಿದ್ದು, ದೊಡ್ಡ ಅನಾಹುತ ತಪ್ಪಿದೆ.

ಮರ ಟೊಳ್ಳಾಗಿ, ಗುಣಮಟ್ಟ ಕಳೆದುಕೊಂಡಿರುವ ಹಿನ್ನೆಲೆ ಬೆಳಗ್ಗೆ ಹತ್ತು ಗಂಟೆ ಸಮಯದಲ್ಲಿ ಮರ ಧರೆಗೆ ಉರುಳಿದೆ. ಪರಿಣಾಮ ಆರಕ್ಕೂ ಹೆಚ್ಚು ಕಾರುಗಳು ಸಂಪೂರ್ಣ ಜಖಂ ಅಗಿವೆ. ಅದೃಷ್ಟವಶಾತ್ ಬೃಹತ್ ಮರ, ರಸ್ತೆಯ ಪಕ್ಕಕ್ಕೆ ಬಿದ್ದಿದರಿಂದ ಅನಾಹುತ ತಪ್ಪಿ ಹೋಗಿದೆ.

ಒಂದು ವೇಳೆ ರಸ್ತೆಗೆ ಬಿದ್ದಿದ್ದರೆ ರಸ್ತೆಯಲ್ಲಿ ಸಂಚಾರ ಮಾಡುವ ವಾಹನ ಸವಾರರ ಜೀವಕ್ಕೆ ಅಪಾಯವಾಗುವ ಸಾಧ್ಯತೆಯಿತ್ತು. ಬೃಹತ್ ಮರದಡಿ ಸಿಲುಕಿರುವ ಕಾರುಗಳ ಗಾಜುಗಳು ಪುಡಿ ಪುಡಿಯಾಗಿವೆ. ಘಟನಾ ಸ್ಥಳಕ್ಕೆ ಸ್ಥಳೀಯ ಕಾರ್ಪೊರೇಟರ್ ಕೋಕಿಲಾ ಭೇಟಿ ನೀಡಿ ಪರಿಶೀಲಿಸಿದ್ದಾರೆ. 10ಕ್ಕೂ ಹೆಚ್ಚು ಅಗ್ನಿಶಾಮಕದಳ ಸಿಬ್ಬಂದಿ ಮರ ತೆರವು ಕಾರ್ಯಚರಣೆ ನಡೆಸಿದ್ದಾರೆ.

Comments

Leave a Reply

Your email address will not be published. Required fields are marked *