ಸೋಮವಾರ ಸಂಪುಟ ವಿಸ್ತರಣೆ ಡೌಟ್

ಬೆಂಗಳೂರು: ಇಬ್ಬರು ಹಾಲಿ ಸಚಿವರ ಮನವೊಲಿಕೆ ಸಾಧ್ಯವಾಗದ ಹಿನ್ನೆಲೆಯಲ್ಲಿ ಸೋಮವಾರ ಸಂಪುಟ ವಿಸ್ತರಣೆ ಅನುಮಾನ ವ್ಯಕ್ತವಾಗಿದೆ.

ಉಪ ಚುನಾವಣೆಯಲ್ಲಿ ಗೆದ್ದ ಶಾಸಕರು ಹಾಗೂ ಹೊಸಬರಿಗೆ ಸಚಿವಸ್ಥಾನ ನೀಡುವ ನಿಟ್ಟಿನಲ್ಲಿ ಇಬ್ಬರು ಹಾಲಿ ಸಚಿವರಿಗೆ ಕೊಕ್ ಕೊಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ ಆ ಇಬ್ಬರು ಶಾಸಕರ ಮನವೊಲಿಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಸಂಪುಟ ವಿಸ್ತರಣೆ ಬುಧವಾರ ಆಗಲಿದೆ ಎಂಬ ಮಾಹಿತಿ ಮೂಲಗಳಿಂದ ಲಭಿಸಿದೆ.

ಸಿಎಂ ಯಡಿಯೂರಪ್ಪ ಅವರು ಹೈಕಮಾಂಡ್ ಎದುರು ಪುನಾರಚನೆ ಇಲ್ಲ ಎಂದಿದ್ದರು. ಹೀಗಾಗಿ ಇಬ್ಬರನ್ನು ಮನವೊಲಿಸಿ ರಾಜೀನಾಮೆ ಕೊಡಿಸುವ ಬಗ್ಗೆ ಪ್ಲ್ಯಾನ್ ರೂಪಿಸಿದ್ದರು. ಒಂದು ವೇಳೆ ಮನವೊಲಿಕೆ ಸಾಧ್ಯವಾಗದಿದ್ದರೆ ವಿಸ್ತರಣೆ ಮಾಡಲು ಸಿಎಂ ಯಡಿಯೂರಪ್ಪ ಯೋಚಿಸುತ್ತಿದ್ದಾರೆ ಎನ್ನಲಾಗಿದೆ.

Comments

Leave a Reply

Your email address will not be published. Required fields are marked *