ಅಜ್ಞಾತ ಸ್ಥಳದಲ್ಲಿ ಸಿದ್ದರಾಮಯ್ಯ ಸಂಧಾನ

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಅಜ್ಞಾತ ಸ್ಥಳದಲ್ಲಿ ಬೆಂಗಳೂರು ನಗರ ಶಾಸಕರ ಸಂಧಾನಕ್ಕೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

ಸಿದ್ದರಾಮಯ್ಯ ಅವರು ಹೆಬ್ಬಾಳ ಶಾಸಕ ಭೈರತಿ ಸುರೇಶ್ ಅವರ ಜೊತೆಗೆ ರಹಸ್ಯ ಸ್ಥಳದಲ್ಲಿ ಸಂಧಾನ ನಡೆಸಿದರು. ಹೀಗಾಗಿ ತಮ್ಮ ಗನ್ ಮೆನ್‍ಗಳು ಹಾಗೂ ಆಪ್ತ ಸಹಾಯಕರನ್ನು ಬಿಟ್ಟು ಗೌಪ್ಯ ಸ್ಥಳಕ್ಕೆ ತೆರಳಿ ಬೇಡಿಕೆಯನ್ನು ಆಲಿಸಿದ್ದಾರೆ. ಬೆಂಗಳೂರಿಗೆ ಸಿಎಂ ಬಂದರೂ ಸಿದ್ದರಾಮಯ್ಯ ಅವರು ಅಜ್ಞಾತ ಸ್ಥಳದಲ್ಲಿಯೇ ಉಳಿದುಕೊಂಡು ಅತೃಪ್ತ ಮನವೊಲಿಕೆಗೆ ಯತ್ನಿಸುತ್ತಿದ್ದಾರೆ ಎಂದು ಪಬ್ಲಿಕ್ ಟಿವಿಗೆ ಮೂಲಗಳು ತಿಳಿಸಿವೆ.

ಮಾಜಿ ಸಿಎಂ ಫುಲ್ ಗರಂ:
ಸಿದ್ದರಾಮಯ್ಯ ಅವರು ಬೆಂಗಳೂರು ನಗರ ಶಾಸಕರ ಜೊತೆ ಸಭೆ ಮುಗಿಸಿ ಹೊರ ಬಂದರು. ಈ ವೇಳೆ ಮುಂಬೈನಲ್ಲಿ ಅತೃಪ್ತರ ಸುದ್ದಿಗೋಷ್ಠಿಯ ಬಗ್ಗೆ ಮಾಧ್ಯಮದವರು ಪ್ರಶ್ನೆ ಮಾಡಿದರು. ಮಾಧ್ಯಮಗಳ ವಿರುದ್ಧ ಫುಲ್ ಗರಂ ಆದ ಅವರು, ನಾನು ಮಾತನಾಡಲ್ಲ ಹೋಗ್ರಿ ಎಂದು ಲೋಗೋ ತಳ್ಳಿ ನಡೆದರು.

Comments

Leave a Reply

Your email address will not be published. Required fields are marked *