ಲಂಚ ಪಡೆದ ಆರೋಪ- ಬೆಂಗಳೂರು ಡಿಸಿ ಎತ್ತಂಗಡಿ

ಬೆಂಗಳೂರು: ಲಂಚ ಪಡೆದ ಆರೋಪದಡಿ ಬೆಂಗಳೂರು ಡಿಸಿ ಮಂಜುನಾಥ್‍ರನ್ನ ಸರ್ಕಾರ ಎತ್ತಂಗಡಿ ಮಾಡಿ ಆದೇಶ ನೀಡಿದೆ.

ಭ್ರಷ್ಟಾಚಾರ ಪ್ರಕರಣದಲ್ಲಿ ಕೆಳಹಂತದ ಅಧಿಕಾರಿಗಳನ್ನ ಮಾತ್ರ ಎಸಿಬಿ ಮುಟ್ಟೋದು ಅಂತಾ ಹೈಕೋರ್ಟ್ ಛಾಟಿ ಬೆನ್ನಲ್ಲೇ ಸರ್ಕಾರ ಬೆಂಗಳೂರು ಡಿಸಿ ಮಂಜುನಾಥ್‍ರನ್ನ ವರ್ಗಾವಣೆ ಮಾಡಿದೆ. ಇದನ್ನೂ ಓದಿ: ದಕ್ಷಿಣ ಇರಾನ್‍ನಲ್ಲಿ ಭೂಕಂಪನ- ಮೂವರು ಸಾವು, 16 ಮಂದಿಗೆ ಗಂಭೀರ ಗಾಯ

ಇತ್ತೀಚೆಗೆ ಎಸಿಬಿ ಡಿಸಿ ಕಚೇರಿ ಮೇಲೆ ದಾಳಿ ನಡೆಸಿತ್ತು. ಗುರುವಾರವೂ ಸಹ ಮಂಜುನಾಥ್‍ರನ್ನ 10 ಗಂಟೆಗಳ ಕಾಲ ವಿಚಾರಣೆ ಮಾಡಲಾಗಿತ್ತು. ಇದಕ್ಕೆ ಸಂಬಂಧಿಸಿ ಹೈಕೋರ್ಟ್ ಸರ್ಕಾರಕ್ಕೆ ಛೀಮಾರಿ ಹಾಕಿತ್ತು. ಎಲ್ಲ ವಿವಾದಗಳ ಮಧ್ಯೆ ಡಿಸಿಯನ್ನ ಎತ್ತಂಗಡಿ ಮಾಡಿ ಇಂಟಿಗ್ರೇಟೆಡ್ ಚೈಲ್ಡ್ ಪ್ರೊಟೆಕ್ಷನ್ ಸ್ಕೀಮ್ ಎಂಡಿಯಾಗಿ ವರ್ಗಾವಣೆ ಮಾಡಿದೆ. ನೂತನ ಡಿಸಿಯಾಗಿ ಸಂಗಪ್ಪ ನೇಮಕಗೊಂಡಿದ್ದಾರೆ.

Live Tv

Comments

Leave a Reply

Your email address will not be published. Required fields are marked *