ರಾಜಕಾಲುವೆಯಲ್ಲಿ ಕೊಚ್ಚಿ ಹೋದ ಮಗು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ರಾಜಕಾಲುವೆಯಲ್ಲಿ 5 ವರ್ಷದ ಮಗುವೊಂದು ಕೊಚ್ಚಿಹೋಗಿದೆ ಎಂಬ ಶಂಕೆ ವ್ಯಕ್ತವಾಗಿದೆ.

ಗೋರಿಪಾಳ್ಯದ ಪಾದರಾಯನಪುರದ ಗುಡ್ಡದಹಳ್ಳಿ ಬಳಿ ಈ ಘಟನೆ ನಡೆದಿದೆ. ಇಮ್ರಾನ್ ಶರೀಫ್ ಮತ್ತು ಗುಲ್ಶಾನ್ ದಂಪತಿಯ ಪುತ್ರನಾಗಿರೊ ಮೊಹಮ್ಮದ್ ಝೈನ್ (5) ಕೊಚ್ಚಿ ಹೋಗಿದ್ದಾನೆ ಎಂದು ಹೇಳಲಾಗಿದೆ.

ಮಗುವಿನ ತಂದೆ ನಾಲ್ಕು ತಿಂಗಳ ಹಿಂದೆ ತೀರಿಹೋಗಿದ್ದು, ಕಳೆದ ಶುಕ್ರವಾರ ಏರಿಯಾದ ಹುಡುಗರ ಜೊತೆ ಕಸ ಹಾಕಲು ಬಂದಿದ್ದ ಮಗು ಆಯತಪ್ಪಿ ಮೋರಿಯೊಳಗೆ ಬಿದ್ದಿರುವುದಾಗಿ ಮಗು ತಾಯಿ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡಿರುವ ಜೆಜೆ ನಗರ ಪೊಲೀಸ್ ಠಾಣಾ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಯೊಂದಿಗೆ ಗುಡ್ಡದಹಳ್ಳಿಯ ದೊಡ್ಡ ಮೋರಿಯಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

Comments

Leave a Reply

Your email address will not be published. Required fields are marked *