ಬೆಂಗಳೂರು: ತೀವ್ರ ಕುತೂಹಲ ಮೂಡಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದ ಕ್ಲೈಮ್ಯಾಕ್ಸ್ ಸೀನ್ ಇಂದು ನಡೆಯಲಿದೆ.
ರಾಜೀನಾಮೆ ನಿರ್ಧಾರದ ಬಗ್ಗೆ ಅಲೋಚನೆ ಮಾಡಿ ನಿರ್ಧಾರ ತಿಳಿಸಿ ಎಂದಿದ್ದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರಿಗೆ ಇಂದು ತಮ್ಮ ನಿರ್ಧಾರವನ್ನ ಎಚ್. ವಿಶ್ವನಾಥ್ ತಿಳಿಸಲಿದ್ದಾರೆ. ಈಗಾಗಲೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ವಿಶ್ವನಾಥ್ ಮನವೊಲಿಕೆಗೆ ಜೆಡಿಎಸ್ ವರಿಷ್ಠ ದೇವೇಗೌಡ್ರು ಪ್ರಯತ್ನ ಪಟ್ಟಿದ್ದರಾದ್ರು ಇದಕ್ಕೆ ಒಪ್ಪಿರಲಿಲ್ಲ.

ಮಂಗಳವಾರ ತಮ್ಮ ನಿವಾಸದಲ್ಲಿ ಸುದೀರ್ಘ ಮಾತುಕತೆ ಬಳಿಕವೂ ವಿಶ್ವನಾಥ್ ರಾಜೀನಾಮೆ ವಾಪಸ್ ಪಡೆಯೋ ನಿರ್ಧಾರ ಮಾಡಿರಲಿಲ್ಲ. ಈ ವೇಳೆ ಗುರುವಾರದವರೆಗೆ ಯೋಚನೆ ಮಾಡಿ ತಮ್ಮ ನಿರ್ಧಾರ ತಿಳಿಸಿ ಎಂದು ದೇವೇಗೌಡರು ಹೇಳಿದ್ದರು.
ಇಂದು ಸ್ವತಃ ದೇವೇಗೌಡರನ್ನ ಭೇಟಿಯಾಗಲಿರುವ ವಿಶ್ವನಾಥ್, ತಮ್ಮ ನಿರ್ಧಾರ ತಿಳಿಸಲಿದ್ದಾರೆ. ದೇವೇಗೌಡರ ಮಾತಿಗೆ ಮಣಿದು ರಾಜೀನಾಮೆ ವಾಪಸ್ ಪಡೆಯುತ್ತಾರಾ ಅಥವಾ ತಮ್ಮ ರಾಜೀನಾಮೆ ನಿರ್ಧಾರಕ್ಕೆ ಬದ್ಧರಾಗಿರುತ್ತಾರಾ ಅನ್ನೋದು ತೀವ್ರ ಕುತೂಹಲ ಮೂಡಿಸಿದೆ. ಇದೇ ವೇಳೆ ಇಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡರು ಮಹತ್ವದ ಸುದ್ದಿಗೋಷ್ಟಿ ಕರೆದಿದ್ದು, ಕುತೂಹಲಕ್ಕೆ ಕಾರಣವಾಗಿದೆ.
[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

Leave a Reply