ಬೆಂಗಳೂರು ಜಾನ್ಸನ್ ಮಾರುಕಟ್ಟೆ ಮಸೀದಿ ಕಾಂಪೌಂಡ್ ವಿವಾದಕ್ಕೆ ಸಿಕ್ತು ಪರಿಹಾರ

ಬೆಂಗಳೂರು: ನಗರದ ಪ್ರಮುಖ ಕೇಂದ್ರವಾಗಿರುವ ಜಾನ್ಸನ್ ಮಾರುಕಟ್ಟೆ ಬಳಿಯ ಮಸೀದಿ ವಿವಾದಕ್ಕೆ ಶಾಂತಿಯುತ ಪರಿಹಾರ ಸಿಕ್ಕದೆ.

ಪ್ರಮುಖವಾಗಿ ಹೊಸೂರು ರಸ್ತೆ ಅಗಲೀಕರಣ ಕಾಮಗಾರಿಯನ್ನು ಆರಂಭಿಸಿದ್ದ ಸರ್ಕಾರ ರಸ್ತೆ ನಿರ್ಮಾಣಕ್ಕೆ ಅಡ್ಡವಾಗಿ ನಿರ್ಮಿಸಿದ್ದ ಮಸೀದಿಯ ಕಾಂಪೌಂಡ್ ತೆರವುಗೊಳಿಸಲು ಮುಂದಾಗಿತ್ತು. ಆದರೆ ಈ ಕ್ರಮಕ್ಕೆ ಮಸೀದಿಯ ಆಸ್ಕರ್ ಕಮಿಟಿ ಭಾರೀ ವಿರೋಧ ವ್ಯಕ್ತ ಪಡಿಸಿತ್ತು. ರಸ್ತೆಯ ತುದಿಗೂ ಮಸೀದಿಯ ಕಾಂಪೌಂಡ್ ನಿರ್ಮಾಣ ಮಾಡಿದ್ದರಿಂದ ಸ್ಥಳದಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗಿತ್ತು.

ಈ ನಡುವೆ ಸಮಸ್ಯೆಯನ್ನು ಬಗೆಹರಿಸಲು ಮಸೀದಿಯ ಆಸ್ಕರ್ ಕಮಿಟಿ ಯೊಂದಿಗೆ ಚರ್ಚೆ ನಡೆಸಿದ ಬಿಬಿಎಂಪಿ ಅವರ ಮನವೊಲಿಸಲು ಯಶಸ್ವಿಯಾಗಿತ್ತು. ಹಿನ್ನಲೆಯ ಶಾಸಕ ಹ್ಯಾರಿಸ್ ಮತ್ತು ಮೇಯರ್ ಸಂಪತ್ ರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಸರ್ಕಾರದ ವತಿಯಿಂದ ಕಾಂಪೌಂಡ್ ತೆರವು ಕಾರ್ಯಾಚರಣೆ ನಡೆಸಲಾಯಿತು.

ಇದೇ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಮೇಯರ್ ಸಂಪತ್ ರಾಜ್ ನಗರದಲ್ಲಿ ನಡೆಯುತ್ತಿರುವ ಗುಂಡಿ ಮುಚ್ಚುವ ಕಾರ್ಯಾಚರಣೆಯಲ್ಲಿ ಕೆಲವು ಸ್ಥಳಗಳಲ್ಲಿ ಕಳಪೆ ಕಾಮಗಾರಿ ನಡೆದಿರುವ ಮಾಹಿತಿ ಇದ್ದು, ಮತ್ತೆ ಅದೇ ಗುತ್ತಿಗೆದಾರರಿಗೆ ಸರಿಪಡಿಸಲು ಸೂಚಿಸಲಾಗಿದೆ. ಸಿಎಂ ಸಿದ್ದರಾಮಯ್ಯನವರು ನೀಡಿರುವ ಗಡುವಿನ ವೇಳೆಗೆ ಗುಂಡಿಗಳನ್ನು ಮುಚ್ಚಲಾಗುವುದು ಎಂದು ತಿಳಿಸಿದರು.

 

Comments

Leave a Reply

Your email address will not be published. Required fields are marked *