ಪೈಲ್ವಾನ್ ವಿರುದ್ಧ ಅಪಪ್ರಚಾರ – ನಾನು ಖುಷಿಯಾಗಿದ್ದೇನೆ ಎಂದ ಕಿಚ್ಚ

ಬೆಂಗಳೂರು: ಪೈಲ್ವಾನ್ ಚಿತ್ರದ ಬಗ್ಗೆ ಅಪಪ್ರಚಾರ ಮಾಡುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಚಿತ್ರ ರಿಲೀಸ್ ಆಗಿ ಮೂರನೇ ದಿನಕ್ಕೆ ಕಾಲಿಟ್ಟಿದ್ದು ಪ್ಯಾನ್ ಇಂಡಿಯಾ ಒಳ್ಳೆಯ ಒಪನಿಂಗ್ ಪಡೆದುಕೊಂಡಿದೆ.

ಕೆಲವರು ಕಿಚ್ಚನ ವಿರುದ್ಧ ಮಸಲತ್ತು ಶುರುಮಾಡಿಕೊಂಡಿದ್ದಾರೆ. ಖಾಲಿ ಇರುವ ಥೀಯೇಟರ್ ಗಳ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಡುತ್ತಿದ್ದಾರೆ. ಸಿನಿಮಾ ನೋಡೊದಕ್ಕೆ ಜನರಿಲ್ಲ ಎನ್ನುತ್ತಾ ಕಾಲೆಳೆಯುವ ಪ್ರಯತ್ನಕ್ಕೆ ಮುಂದಾಗಿದ್ದಾರೆ.

ಈ ಒಂದು ವಿಚಾರ ಸುದೀಪ್ ಕಿವಿಗೂ ಬಿದ್ದಿದ್ದು ವೈರಲ್ ಆಗಿರುವ ವಿಡಿಯೋ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ಮೈಸೂರಿನ ಗಾಯಿತ್ರಿ ಚಿತ್ರಮಂದಿರದಲ್ಲಿ ಹೌಸ್ ಪ್ರದರ್ಶನ ಕಾಣುತ್ತಿದೆ. ಯಾರು ಕೆಟ್ಟ ಸುದ್ದಿಗಳನ್ನು ಹರಡಿಸುತಾರೋ ಅವರಿಂದ ನಾನು ಖುಷಿಯಾಗಿ ಇದ್ದೇನೆ. ನಾನು ಒಳ್ಳೆಯ ಕೆಲಸಗಳನ್ನು ಮಾಡಿದಾಗಲೇ ಕೆಟ್ಟದನ್ನು ಹಬ್ಬಿಸೋದಕ್ಕೆ ಸಾಧ್ಯ ಎನ್ನುವ ಟ್ವೀಟ್ ಮಾಡುವ ಮೂಲಕ ಅಭಿಮಾನಿಗಳಿಗೆ ಕಿಡಿಗೇಡಿಗಳಿಂದ ದೂರವಿರುವಂತೆ ಕಿವಿಮಾತನ್ನು ಹೇಳಿದ್ದಾರೆ.

ಈ ಹಿಂದೆ ಪೈಲ್ವಾನ್ ಚಿತ್ರದ ಹಿಂದಿ ವರ್ಷನ್‍ಗೆ ಸೆನ್ಸಾರ್ ಸಿಕ್ಕಿಲ್ಲ ಹಿಂದಿ ವರ್ಷನ್ ಒಂದು ದಿನ ತಡವಾಗಿ ಬಿಡುಗಡೆಯಾಗವ ಸಾಧ್ಯತೆ ಇದೆ ಎಂದು ಸುಳ್ಳು ಸುದ್ದಿ ಹಬ್ಬಿತ್ತು. ಆದರೆ ಈ ವಿಚಾರದ ಬಗ್ಗೆ ಮಾಹಿತಿ ನೀಡಿರುವ ಕೃಷ್ಣ ಸೆನ್ಸಾರ್ ಸಿಕ್ಕಿದೆ ಸೆನ್ಸಾರ್ ಮಂಡಳಿ ಸೆನ್ಸಾರ್ ಕಾಪಿ ಸಹ ನೀಡಿದ್ದಾರೆ. ಸೆನ್ಸಾರ್ ಆಗಿಲ್ಲ ಎಂಬ ಸುಳ್ಳು ಸುದ್ದಿಯನ್ನು ಹಬ್ಬಿಸದಂತೆ ಮನವಿ ಮಾಡಿಕೊಂಡಿದ್ದಾರೆ.

ಈ ಚಿತ್ರವನ್ನು ಎಸ್ ಕೃಷ್ಣ ನಿರ್ದೇಶನ ಮಾಡಿದ್ದು, ಅವರ ಪತ್ನಿ ಸ್ವಪ್ನ ಕೃಷ್ಣ ಅವರು ನಿರ್ಮಾಣ ಮಾಡಿದ್ದಾರೆ. ಈ ಚಿತ್ರದಲ್ಲಿ ಕಿಚ್ಚ ಸುದೀಪ್‍ಗೆ ನಾಯಕಿಯಾಗಿ ಆಕಾಂಕ್ಷ ಸಿಂಗ್ ನಟಿಸಿದ್ದಾರೆ. ಬಾಲಿವುಡ್‍ನ ಸುನೀಲ್ ಶೆಟ್ಟಿ, ಕಬೀರ್ ದುಹಾನ್ ಸಿಂಗ್ ಮತ್ತು ಸುಶಾಂತ್ ಸಿಂಗ್ ನಟನೆ ಮಾಡಿರುವ ಈ ಚಿತ್ರಕ್ಕೆ ಅರ್ಜನ್ ಜನ್ಯ ಸಂಗೀತ ನಿರ್ದೇಶನ ಮಾಡಿದ್ದಾರೆ.

Comments

Leave a Reply

Your email address will not be published. Required fields are marked *