ದೇವೇಗೌಡ್ರು ಕುಮಾರಸ್ವಾಮಿಗೆ ಸರಿಯಾಗಿ ಟ್ರೈನಿಂಗ್ ಕೊಟ್ಟಿಲ್ಲ – ವಿ ಸೋಮಣ್ಣ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಗೆ ದೇವೇಗೌಡರು ಸರಿಯಾದ ರೀತಿಯಲ್ಲಿ ತರಬೇತಿ ನೀಡಿಲ್ಲ ಅನಿಸುತ್ತದೆ ಎಂದು ವಸತಿ ಸಚಿವ ವಿ. ಸೋಮಣ್ಣ ಹೆಚ್‍ಡಿಕೆ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.

ಇಂದು ಮುಂಜಾನೆ ಕಬ್ಬನ್ ಪಾರ್ಕಿನಲ್ಲಿ ಮಾತನಾಡಿದ ಸೋಮಣ್ಣ ಮಂಗಳೂರು ಬಾಂಬ್ ಪ್ರಕರಣದ ಬಗ್ಗೆ ಹೆಚ್‍ಡಿಕೆ ಟೀಕೆಗೆ ಖಾರವಾಗಿ ತಿರುಗೇಟು ನೀಡಿದರು. ಹೆಚ್‍ಡಿ ಕುಮಾರಸ್ವಾಮಿ ಎರಡು ಬಾರಿ ರಾಜ್ಯಕ್ಕೆ ಮುಖ್ಯಮಂತ್ರಿಯಾಗಿದ್ದವರು ಅವರ ಬಾಯಿಯಲ್ಲಿ ಇಂತಹ ಮಾತುಗಳು ಸಲ್ಲದು. ಕುಮಾರಸ್ವಾಮಿಗೆ ಇಂತಹ ಕೀಳುಮಟ್ಟದ ಹೇಳಿಕೆಗಳು ಶೋಭೆ ತರುವುದಿಲ್ಲ ಎಂದು ಹೇಳಿದರು.

ದಕ್ಷ ಪೊಲೀಸ್ ಅಧಿಕಾರಿಗಳ ದಕ್ಷತೆಯನ್ನ ಕುಗ್ಗಿಸುತ್ತವೇ ಇಂತಹ ಹೇಳಿಕೆಗಳು. ಕುಮಾರಸ್ವಾಮಿಯರು ಕೆಲವೊಮ್ಮೆ ಹಿಟ್ ಅಂಡ್ ರನ್ ಮಾಡುತ್ತಾರೆ. ಇದು ಅವರಿಗೂ ಒಳ್ಳೆಯದಲ್ಲ. ಕುಮಾರಸ್ವಾಮಿಯರವರ ಈ ಹೇಳಿಕೆಯನ್ನು ದೇವೇಗೌಡರು ಸಿರಿಯಸ್ ಆಗಿ ತಗೆದುಕೊಂಡಿಲ್ಲ ಅನ್ನಿಸುತ್ತೆ. ಕುಮಾರಸ್ವಾಮಿ ಗಂಟೆಗೊಂದು ಹೇಳಿಕೆ ನೀಡಿ ನಾನು ಮಾತನಾಡಿಲ್ಲ ಅಂತಾರೆ ಎಂಧು ವ್ಯಂಗ್ಯವಾಡಿದರು.

ಮಂಗಳೂರಿನಲ್ಲಿ ಗಣರಾಜ್ಯೋತ್ಸವ ಸ್ವಾತಂತ್ರ್ಯ ದಿನಾಚಾರಣೆಗೂ ಮುನ್ನ ಪೊಲೀಸ್ರು ಅಣಕು ಪ್ರದರ್ಶನ ಮಾಡುವ ರೀತಿಯಲ್ಲಿ, ಮಂಗಳೂರು ಕಮಿಷನರ್ ಹರ್ಷ ಅಣಕು ಪ್ರದರ್ಶನ ಮಾಡಿ ಜನರಲ್ಲಿ ಆತಂಕ ಹುಟ್ಟಿಸಿದ್ದಾರೆ ಎಂದು ಕುಮಾರಸ್ವಾಮಿಯವರು ವ್ಯಂಗ್ಯವಾಡಿದರು.

Comments

Leave a Reply

Your email address will not be published. Required fields are marked *