ಪಿಎಂ ಪರಿಹಾರ ನಿಧಿಗೆ ಸೈಕಲ್ ಪ್ಯೂರ್ ಅಗರಬತ್ತಿ ಸಂಸ್ಥೆ 1.08 ಕೋಟಿ ರೂ. ದೇಣಿಗೆ

ಬೆಂಗಳೂರು: ಕೊರೊನಾ ವೈರಸ್ ಪರಿಹಾರ ಕಾರ್ಯಗಳಿಗೆ ಸೈಕಲ್ ಪ್ಯೂರ್ ಅಗರಬತ್ತಿ ಕಂಪನಿಯು ಪಿಎಂ ಕೇರ್ಸ್ ಪರಿಹಾರ ನಿಧಿಗೆ 1.08 ಕೋಟಿ ದೇಣಿಗೆ ನೀಡಿದೆ.

ಇದರ ಜೊತೆಗೆ ಮೈಸೂರಿನಲ್ಲಿ ವಲಸೆ ಕಾರ್ಮಿಕರು, ನಿರ್ಗತಿಕರು ಹಾಗೂ ಪೊಲೀಸ್ ಸಿಬ್ಬಂದಿಗೆ ಆಹಾರ ಪೂರೈಕೆ ಮಾಡಲು 1 ಲಕ್ಷ ಕೊಟ್ಟಿದೆ. ಇದಲ್ಲದೇ ಸರ್ಕಾರಿ ಆಸ್ಪತ್ರೆಗೆ ಐದು ವೆಂಟಿಲೇಟರ್ ಗಳನ್ನು ಕೊಡುಗೆಯಾಗಿ ನೀಡಿದೆ. ಈ ವಿಚಾರವಾಗಿ ಮಾತನಾಡಿರುವ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಅರ್ಜುನ ರಂಗ, `ದೊಡ್ಡ ಸವಾಲು ಎದುರಾಗಿದೆ. ಈ ಸವಾಲು ಎದುರಿಸಲು ನಾವೆಲ್ಲರೂ ಸರ್ಕಾರದೊಂದಿಗೆ ಕೈ ಜೋಡಿಸಿ ಹೋರಾಡಬೇಕು’ ಎಂದು ತಿಳಿಸಿದ್ದಾರೆ.

ನಾವು ಪ್ರತಿ ಪ್ರಾರ್ಥನೆಯೊಂದಿಗೆ ಮತ್ತು ಪ್ರತಿಯೊಬ್ಬರ ಯೋಗಕ್ಷೇಮಕ್ಕಾಗಿ ಜೊತೆಗೆ ನಿಲ್ಲುತ್ತೇವೆ. ನಮ್ಮ ತಾಯಿನಾಡು ಮತ್ತು ನಮ್ಮ ಕೊರೊನಾ ಯೋಧರನ್ನು ಬೆಂಬಲಿಸಲು ನಾವು ಒಟ್ಟಾಗಿ ಸೇರುವ ಸಮಯವಿದು. ಹಾಗಾಗಿ ನಾವು ಪಿಎಂ ಕೇರ್ಸ್ ಗೆ 1.08 ಕೋಟಿ ರೂ. ಅನ್ನು ವಿನಮ್ರವಾಗಿ ಕೊಡುಗೆಯಾಗಿ ನೀಡುತ್ತಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.

Comments

Leave a Reply

Your email address will not be published. Required fields are marked *