ಬೆಂಗ್ಳೂರಲ್ಲಿ ಬೆಳ್ಳಂಬೆಳಗ್ಗೆ ಕೊಲೆ ಆರೋಪಿ ಮೇಲೆ ಪೊಲೀಸರಿಂದ ಶೂಟೌಟ್

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರ್ ಗುಂಡೇಟಿನ ಸದ್ದು ಕೇಳಿಬಂದಿದ್ದು, ಕೊಲೆ ಆರೋಪಿ ಮೇಲೆ ಬಾಗಲೂರು ಠಾಣಾ ಇನ್ಸ್‌ಪೆಕ್ಟರ್  ಗುಂಡು ಹಾರಿಸಿದ್ದಾರೆ.

ರವಿ ಅಲಿಯಾಸ್ ಕಮ್ರಾನ್ ರವಿ ಮೇಲೆ ಬಾಗಲೂರು ಪೊಲೀಸ್ ಇನ್ಸ್‌ಪೆಕ್ಟರ್ ಬಿ. ರಾಮಮೂರ್ತಿ ಅವರು ಗುಂಡು ಹಾರಿಸಿದ್ದಾರೆ. ನಗರದ ಕೋಗಿಲು ಕ್ರಾಸ್ ಬಳಿ ಈ ಘಟನೆ ನಡೆದಿದೆ. ಕಮ್ರಾನ್ ರವಿ ಮಾರ್ಚ್ 10ರಂದು ಮಿಟ್ಟಗಾನಹಳ್ಳಿ ಬಳಿ ನಡೆದಿದ್ದ ಉಮಾಶಂಕರ್ ಅಲಿಯಾಸ್ ದೊಂಗನ ಕೊಲೆ ಪ್ರಕರಣದ ಆರೋಪಿಯಾಗಿದ್ದು, ಉಮಾಶಂಕರನನ್ನ ಕೊಲೆಗೈದು ಆಕ್ಸಿಡೆಂಟ್ ಮಾದರಿಯಲ್ಲಿ ಬಿಂಬಿಸಲು ಆರೋಪಿ ಯತ್ನಿಸಿದ್ದನು. ಆದರೆ ಉಮಾಶಂಕರ್ ಪತ್ನಿ ಧನಲಕ್ಷ್ಮೀ ಹೇಳಿಕೆ ಅನ್ವಯ ಬಾಗಲೂರು ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು.

ಹೀಗಾಗಿ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದರು. ಕೋಗಿಲು ಕ್ರಾಸ್ ಬಳಿ ಆರೋಪಿಗಳಾದ ರವಿ ಹಾಗೂ ರಾಜೇಶ್ ಇರುವ ಮಾಹಿತಿ ಲಭ್ಯವಾದ ಹಿನ್ನೆಲೆ ಸ್ಥಳಕ್ಕೆ ಪೊಲೀಸರು ಹೋಗಿದ್ದರು. ಈ ವೇಳೆ ಪೊಲೀಸರ ಮೇಲೆ ಹಲ್ಲೆಗೆ ರವಿ ಮುಂದಾಗಿದ್ದು, ಆತ್ಮರಕ್ಷಣೆಗಾಗಿ ಇನ್ಸ್‌ಪೆಕ್ಟರ್ ಬಿ. ರಾಮಮೂರ್ತಿ ಅವರು ಆರೋಪಿ ಕಾಲಿಗೆ ಗುಮಡು ಹೊಡೆದು ಬಂಧಿಸಿದ್ದಾರೆ. ಸದ್ಯ ಗಾಯಗೊಂಡ ಆರೋಪಿಗಳನ್ನು ಆಸ್ಪತ್ರಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Comments

Leave a Reply

Your email address will not be published. Required fields are marked *