ಕೆರೆಗೆ ಉರುಳಿಬಿದ್ದ ಕಾರು, ಹೊರಬರಲಾರದೆ ಬೆಂಗ್ಳೂರಿನ ನಾಲ್ವರ ದುರ್ಮರಣ

ರಾಮನಗರ: ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಕಾರು ಉರುಳಿ ಬಿದ್ದ ಪರಿಣಾಮ ನಾಲ್ವರು ಮೃತಪಟ್ಟ ಭಾರೀ ದುರ್ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ದೇವಮಾಚೋಹಳ್ಳಿ ಗ್ರಾಮದ ಬಳಿ ನಡೆದಿದೆ.

ಬೆಂಗಳೂರಿನ ಅಗ್ರಹಾರದ ನಿವಾಸಿಗಳಾದ ಸುನೀಲ್, ಸಂತೋಷ್, ಮಂಜುನಾಥ್ ಹಾಗೂ ರಾಘವೇಂದ್ರ ಮೃತ ದುರ್ದೈವಿಗಳು. ಘಟನೆಯಲ್ಲಿ ಓರ್ವರ ಸ್ಥಿತಿ ಚಿಂತಾಚನಕವಾಗಿದ್ದು, ಅವರನ್ನು ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಸುನೀಲ್ ಸೇರಿದಂತೆ ಒಟ್ಟು ಐದು ಜನರು ಕಾರಿನಲ್ಲಿ ಬೆಂಗಳೂರುನಿಂದ ತುಮಕೂರಿನ ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗಾಗೆ ಹೋಗುತ್ತಿದ್ದರು. ಆದರೆ ವೇಗವಾಗಿ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಪರಿಣಾಮ ಉರುಳಿ ಕೆರೆಗೆ ಬಿದ್ದಿದ್ದು, ಕಾರಿನ ಒಳಗಡೆ ನೀರು ತುಂಬಿಕೊಂಡಿತ್ತು. ಈ ವೇಳೆ ಕಾರಿನಿಂದ ಹೊರಗೆ ಬರಲು ಸಾಧ್ಯವಾಗದೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆದರೆ ಒಬ್ಬರು ಪ್ರಯತ್ನ ಪಟ್ಟ ಹೊರ ಬಂದಿದ್ದಾರೆ.

ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ತಾವರೆಕೆರೆ ಠಾಣೆಯ ಪೊಲೀಸರು ನಾಲ್ವರ ಮೃತದೇಹ ಹಾಗೂ ಕಾರನ್ನು ಹೊರ ತೆಗೆದಿದ್ದಾರೆ. ಬಳಿಕ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆಯಿಂದಾಗಿ ಅನೇಕರು ಸ್ಥಳದಲ್ಲಿ ಸೇರಿದ್ದರು. ಹೀಗಾಗಿ ಕೆಲ ಹೊತ್ತು ಸಂಚಾರ ಅಸ್ತವ್ಯಸ್ತವಾಯಿತು.

Comments

Leave a Reply

Your email address will not be published. Required fields are marked *