ಕೋರ್ಟ್ ಆದೇಶ ಪಾಲಿಸದ್ದಕ್ಕೆ ಬೆಂಗಳೂರು ಪೂರ್ವ ತಾಲೂಕು ತಹಶೀಲ್ದಾರ್ ಅಮಾನತು

ಬೆಂಗಳೂರು: ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಕೋರ್ಟ್ ಆದೇಶ ಪಾಲನೆ ಮಾಡಿಲ್ಲ ಎಂಬ ಕಾರಣಕ್ಕೆ ಬೆಂಗಳೂರು ಪೂರ್ವ ತಾಲೂಕು ತಹಶೀಲ್ದಾರ್ ತೇಜಸ್ ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಇಲಾಖಾ ವಿಚಾರಣೆ ನಡೆಸುವಂತೆ ಶಿಫಾರಸು ಮಾಡಲು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಹೈಕೋರ್ಟ್ ನಿರ್ದೇಶಿಸಿದೆ.

ಬೆಂಗಳೂರು ಪೂರ್ವ ತಾಲೂಕು ವರ್ತೂರು ಹೋಬಳಿ ಗುಂಜೂರು ಗ್ರಾಮದ ಸರ್ವೇ ನಂ.138ರಲ್ಲಿ 2 ಎಕರೆ ಜಮೀನನ್ನು ವೆಂಕಟಗಿರಿಯಪ್ಪ ಎಂಬವರಿಗೆ ಮಂಜೂರು ಮಾಡಲಾಗಿದೆಯೇ ಇಲ್ಲವೇ ಎಂಬ ಬಗ್ಗೆ ಮೂರು ತಿಂಗಳಿನಲ್ಲಿ ನಿಖರ ಅಭಿಪ್ರಾಯ ನೀಡುವಂತೆ ಹೈಕೋರ್ಟ್ ಆದೇಶಿಸಿತ್ತು.

ಆದರೆ ಈ ಆದೇಶ ಪಾಲನೆ ಮಾಡಿಲ್ಲ ಎಂಬ ಕಾರಣಕ್ಕೆ ನ್ಯಾಯಮೂರ್ತಿ ಎಸ್.ಎನ್.ಸತ್ಯನಾರಾಯಣ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಜಿಲ್ಲಾಧಿಕಾರಿಗೆ ನಿರ್ದೇಶಿಸಿದೆ. ಜೊತೆಗೆ ಒಂದು ತಿಂಗಳಿನಲ್ಲಿ ಏಕೆ ವಿಚಾರಣೆ ನಡೆಸಿಲ್ಲ ಎಂಬ ಬಗ್ಗೆ ಕೋರ್ಟ್‍ಗೆ ವರದಿ ಸಲ್ಲಿಸಬೇಕು ಎಂದು ತಾಕೀತು ಮಾಡಿ ವಿಚಾರಣೆ ಮುಂದೂಡಿದೆ.

Comments

Leave a Reply

Your email address will not be published. Required fields are marked *