ದುಬಾರಿ ಟ್ರಾಫಿಕ್ ದಂಡಕ್ಕೆ ಸರ್ಕಾರ ಬ್ರೇಕ್

ಬೆಂಗಳೂರು: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಯ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಇದೀಗ ಸರ್ಕಾರ ದುಬಾರಿ ದಂಡಕ್ಕೆ ಬ್ರೇಕ್ ಹಾಕಿದೆ.

ಇದೇ ತಿಂಗಳ 3 ರಿಂದ ಅಂದರೆ ಕಳೆದ 15 ದಿನಗಳಿಂದ ಮೋಟಾರ್ ವಾಹನ ಕಾಯ್ದೆ ತಿದ್ದುಪಡಿಯಾಗಿ, ದೇಶಾದ್ಯಂತ ದುಬಾರಿ ದಂಡ ಹೇರಲಾಗಿತ್ತು. ಈ ದಂಡಕ್ಕೆ ಸವಾರರು ಬೇಸತ್ತು ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಪಬ್ಲಿಕ್ ಟಿವಿ ವರದಿ ಪ್ರಸಾರ ಮಾಡಿತ್ತು. ಈ ಸಂದರ್ಭದಲ್ಲಿ ಸಾರಿಗೆ ಸಚಿವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ದಂಡ ಇಳಿಸುವ ಭರವಸೆ ನೀಡಿದ್ದರು.

ಗುಜರಾತ್ ಹಾಗೂ ಮಹಾರಾಷ್ಟ್ರ ಮಾದರಿಯಲ್ಲಿ ದಂಡ ಇಳಿಸುವ ಭರವಸೆ ನೀಡಿದರು. ಆದರೆ ಎಷ್ಟು ಪ್ರಮಾಣದಲ್ಲಿ ದಂಡದ ಇಳಿಕೆ ಮಾಡುತ್ತೇವೆ ಎನ್ನುವ ಬಗ್ಗೆ ಅಧಿಕೃತ ಆದೇಶ ನೀಡಿರಲಿಲ್ಲ. ಇಂದು ರಾತ್ರಿ ದುಬಾರಿ ದಂಡ ಇಳಿಕೆಯ ಬಗ್ಗೆ ಸರ್ಕಾರದಿಂದ ಅಧಿಕೃತ ಅಧಿಸೂಚನೆ ಹೊರಬಿದ್ದಿದೆ.

ಕುಡಿದು ಮದ್ಯಪಾನ ಮಾಡಿದ್ದಲ್ಲಿ ಈ ಹಿಂದೆ ವಿಧಿಸಲಾಗಿದ್ದ 10 ಸಾವಿರ ರೂ. ದಂಡವನ್ನು ಹಾಗೆಯೇ ಮುಂದುವರಿಸಲಾಗಿದೆ. ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಸಾರಿಗೆ ಆಯುಕ್ತ ಶಿವಕುಮಾರ್, ಗುಜರಾತ್ ಮಾದರಿಯಲ್ಲಿ ದಂಡ ಇಳಿಸಿಲ್ಲ. ಮೋಟಾರು ವಾಹನ ಕಾಯ್ದೆಯಲ್ಲಿನ ತಿದ್ದುಪಡಿಯ 24 ಉಲ್ಲಂಘನೆಗಳಲ್ಲಿ 18 ಉಲ್ಲಂಘನೆಗಳ ದಂಡ ಕಡಿಮೆ ಮಾಡಲಾಗಿದೆ ಎಂದು ತಿಳಿಸಿದರು.

Comments

Leave a Reply

Your email address will not be published. Required fields are marked *