ಕಾರು ಡಿಕ್ಕಿ ಹೊಡೆದ ರಭಸಕ್ಕೆ ಹಾರಿ ಬಿದ್ದ ಯುವಕನ ದೇಹ ಎರಡು ಭಾಗವಾಯ್ತು!

ಸಾಂದರ್ಭಿಕ ಚಿತ್ರ

– ಭೀಕರ ರಸ್ತೆ ಅಪಘಾತದಲ್ಲಿ ತಂದೆ, ಮಗ ದಾರುಣ ಸಾವು

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಮಗನನ್ನು ಬೈಕಿನಲ್ಲಿ ಆಸ್ಪತ್ರೆಗೆ ಕರೆದೊಯ್ಯುವಾಗ ಭೀಕರ ಅಪಘಾತ ಸಂಭವಿಸಿ, ತಂದೆ ಮಗ ಇಬ್ಬರೂ ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಓಲ್ಡ್ ಮದ್ರಾಸ್ ರಸ್ತೆಯ ಅವಲಹಳ್ಳಿ ಫ್ಲೈ ಓವರ್ ಮೇಲೆ ನಡೆದಿದೆ.

ಕೆ.ಆರ್.ಪುರಂ ದೇವಸಂದ್ರ ನಿವಾಸಿ ಬ್ರಹ್ಮಾನಂದ ರೆಡ್ಡಿ(43) ಹಾಗೂ ಅವರ 18 ವರ್ಷದ ಮಗ ಮೃತರು ಎಂದು ತಿಳಿದು ಬಂದಿದೆ. ಮಗನ ಅನಾರೋಗ್ಯದ ಹಿನ್ನೆಲೆ ಕೆ.ಆರ್.ಪುರಂನಿಂದ ಹೊಸಕೋಟೆಗೆ ಬೈಕಿನಲ್ಲಿ ತೆರಳುತ್ತಿದ್ದರು. ಈ ವೇಳೆ ಅವಲಹಳ್ಳಿ ಫ್ಲೈ ಓವರ್ ಮೇಲೆ ವೇಗವಾಗಿ ಬಂದ ಕಾರು ಬ್ರಹ್ಮಾನಂದ ರೆಡ್ಡಿ ಅವರ ಬೈಕಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮಗನ ದೇಹ ಫ್ಲೈ ಓವರ್ ತಡೆಗೋಡೆಗೆ ಬಡಿದು ಎರಡು ತುಂಡಾಗಿದ್ದು, ಬ್ರಹ್ಮಾರೆಡ್ಡಿ ಸಹ ರಸ್ತೆ ಮೇಲೆ ಬಿದ್ದು ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆ ನಂತರ ಕಾರು ಚಾಲಕ ಪರಾರಿಯಾಗಿದ್ದು, ಸ್ಥಳಕ್ಕೆ ಅವಲಹಳ್ಳಿ ಪೋಲಿಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಕಾರು ಚಾಲಕನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *