ಬೆಂಗ್ಳೂರಿನಲ್ಲಿ ನಡೆಯುತ್ತಿದ್ದ ಏರ್ ಶೋ ಲಕ್ನೋಗೆ ಶಿಫ್ಟ್!

ಬೆಂಗಳೂರು: ಪ್ರತಿ ಎರಡು ವರ್ಷಕೊಮ್ಮೆ ಬೆಂಗಳೂರಿನಲ್ಲಿ ನಡೆಯುತ್ತಿದ್ದ ಏರ್ ಶೋ ಉತ್ತರ ಪ್ರದೇಶ ಲಕ್ನೋಗೆ ಸ್ಥಳಾಂತರವಾಗುವ ಸಾಧ್ಯತೆಯಿದೆ. ಈ ಬಗ್ಗೆ ಅಧಿಕೃತವಾಗಿ ನಿರ್ಧಾರ ಪ್ರಕಟವಾಗದೇ ಇದ್ದರೂ ಲಕ್ನೋಗೆ ಸ್ಥಳಾಂತರ ಮಾಡಲು ಸಿದ್ಧತೆ ನಡೆಯುತ್ತಿದೆ ಎಂದು ಮಾಧ್ಯಮವೊಂದು ವರದಿ ಪ್ರಕಟಿಸಿದೆ.

1996ರಿಂದ ಪ್ರತಿ ಎರಡು ವರ್ಷಕ್ಕೊಮ್ಮೆ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಏರ್ ಶೋ ನಡೆಯುತಿತ್ತು. ಆದರೆ 2019ರಲ್ಲಿ ನಡೆಯಲಿರುವ ಏರ್ ಶೋವನ್ನು ಲಕ್ನೋದಲ್ಲಿ ನಡೆಸಲು ಕೇಂದ್ರ ಸರ್ಕಾರ ಮತ್ತು ರಕ್ಷಣಾ ಇಲಾಖೆ ಸಿದ್ಧತೆ ನಡೆಸುತ್ತಿದೆ.

ಸ್ಥಳಾಂತರಗೊಳ್ಳುತ್ತಿರುವ ವಿಚಾರ ವಾಯುಸೇನೆ ಆಧಿಕಾರಿಗಳಿಗೆ ಆಶ್ಚರ್ಯ ಮೂಡಿಸಿದೆ. ಲಕ್ನೋದಲ್ಲಿರುವ ಭಕ್ಷಿ ಕ ತಲಾಬ್ ವಾಯುನೆಲೆ ಸಣ್ಣದಾಗಿದ್ದು, ಇಷ್ಟು ದೊಡ್ಡ ಮಟ್ಟದ ಶೋವನ್ನು ಹೇಗೆ ಆಯೋಜನೆ ಮಾಡಲಾಗುತ್ತದೆ ಎಂದು ಹಿರಿಯ ಅಧಿಕಾರಿಗಳು ಪ್ರಶ್ನಿಸಿದ್ದಾರೆ ಎಂದು ವರದಿಯಾಗಿದೆ.

ಯಾವ ಕಾರಣಕ್ಕಾಗಿ ಏರ್ ಶೋ ಸ್ಥಳಾಂತರವಾಗುತ್ತದೆ ಎನ್ನುವುದು ತಿಳಿದು ಬಂದಿಲ್ಲ. ಏರ್ ಶೋ ಸ್ಥಳಾಂತರವಾಗುತ್ತಿರುವ ವಿಚಾರ ತಿಳಿದು ಸಾಮಾಜಿಕ ಜಾಲತಾಣದಲ್ಲಿ ಕೇಂದ್ರದ ವಿರುದ್ಧ ಕನ್ನಡಿಗರು ಟೀಕೆ ವ್ಯಕ್ತಪಡಿಸುತ್ತಿದ್ದಾರೆ.

ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾದ ನಿರ್ಮಲಾ ಸೀತಾರಾಮನ್ ಮಾಡಿದ್ದು ಸರಿಯೇ? ಬೆಂಗಳೂರಿನಿಂದ ಲಕ್ನೋಗೆ ಏರ್ ಶೋ ಸ್ಥಳಾಂತರ ಮಾಡುತ್ತಿರೋದು ನ್ಯಾಯಯುತವೇ? ನಾಡು-ನುಡಿ ರಕ್ಷಣೆಗೆ ನಿಲ್ಲಬೇಕಾದ ನಿರ್ಮಲಾ ಸೀತಾರಾಮನ್ ಒತ್ತಡಕ್ಕೆ ಮಣಿದ್ರಾ? ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಒತ್ತಡಕ್ಕೆ ಕೇಂದ್ರ ತಲೆ ಬಾಗುತ್ತಿದ್ಯಾ? ರಾಜ್ಯದ ಸಂಸದರು, ಕೇಂದ್ರ ಸಚಿವರುಗಳ ಮೌನ ಸರಿಯೇ ಎಂದು ಪ್ರಶ್ನೆ ಮಾಡುತ್ತಿದ್ದಾರೆ.

ಈ ಹಿಂದೆ ರಕ್ಷಣಾ ಸಚಿವರಾಗಿದ್ದ ಮನೋಹರ್ ಪರಿಕ್ಕರ್ ಅವರು ಏರ್ ಶೋವನ್ನು ಗೋವಾದಲ್ಲಿ ನಡೆಸಲು ಉತ್ಸುಕರಾಗಿದ್ದರು. ಈ ವಿಚಾರ ಮಾಧ್ಯಮಗಳಲ್ಲಿ ಪ್ರಕಟವಾಗದ ಬಳಿಕ ಕನ್ನಡಿಗರು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ಬಳಿಕ ಈ ಮನೋಹರ್ ಪರಿಕ್ಕರ್ ಅವರೇ ಗೋವಾದಲ್ಲಿ ಏರ್ ಶೋ ನಡೆಯುವ ಯಾವುದೇ ಪ್ರಸ್ತಾಪವಿಲ್ಲ ಎಂದು ಹೇಳಿ ವಿಚಾರವನ್ನು ತಣ್ಣಗೆ ಮಾಡಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

Comments

Leave a Reply

Your email address will not be published. Required fields are marked *